Advertisement

Ram Mandir: ಅರಾಜಕತೆ ಪ್ರಜಾಪ್ರಭುತ್ವ ನಮ್ಮಲ್ಲಿಲ್ಲ: ಮಂದಿರದ ಬಗ್ಗೆ ಪಾಕ್‌ ಕ್ಯಾತೆಗೆ ಚಾಟಿ

12:17 AM Jan 27, 2024 | Team Udayavani |

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಕ್ಕೆ ವಿಶ್ವಸಂಸ್ಥೆಗೆ ದೂರು ನೀಡಿ ಉದ್ಧಟತನ ಮೆರೆದ ಪಾಕಿಸ್ಥಾನಕ್ಕೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಪಾಕಿಸ್ಥಾನದಂತೆ ಅರಾಜಕತೆಯ ಪ್ರಜಾಪ್ರಭುತ್ವ ಭಾರತದಲ್ಲಿ ಇಲ್ಲವೆಂದು ಕೇಂದ್ರ ಸರಕಾರ ಕಟುವಾಗಿ ಹೇಳಿದೆ. ವಿಶ್ವಸಂಸ್ಥೆಯಲ್ಲಿನ ಪಾಕಿಸ್ಥಾನದ ಶಾಶ್ವತ ರಾಯಭಾರಿ ಮುನೀರ್‌ ಅಕ್ರಮ್‌ ಬಾಬರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ನಿರ್ಮಿಸಲಾಗಿದೆ. ಅದು ಮುಸ್ಲಿಮರ ಅಭಿವೃದ್ಧಿಗೆ ತೊಡಕಾಗಲಿದೆ ಎಂದಿದ್ದರು.

Advertisement

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಭಾರತ ನಮ್ಮಲ್ಲಿ ಅಸ್ತಿತ್ವದಲ್ಲಿರುವುದು ಪ್ರಜೆಗಳೇ ಮುನ್ನಡೆಸುವ ಪ್ರಜಾಪ್ರಭುತ್ವ. ಕೋರ್ಟ್‌ ಅನುಮತಿ ನೀಡಿದ ಬಳಿಕವೇ ಮಂದಿರ ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next