Advertisement

NCP ಬಿಟ್ಟು ಹೋದವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಬದಲು…: ಶರದ್ ಪವಾರ್

04:35 PM Dec 02, 2023 | Vishnudas Patil |

ಪುಣೆ: ”ಪಕ್ಷ ಬಿಟ್ಟು ಹೋದವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ,ಆ ಬಗ್ಗೆ ತಲೆ ಕೆಡಿಸಿಕೊಳ್ಳುವ ಬದಲು ನಾಗರಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅವುಗಳನ್ನು ಬಗೆಹರಿಸಬೇಕು” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದರು.

Advertisement

”ನಮ್ಮ ಯುವ ನಾಯಕರನ್ನು ನಾವು ಬಲಗೊಳಿಸಿದರೆ ಮುಂಬರುವ ಚುನಾವಣೆಯಲ್ಲಿ ಉತ್ತಮ ಯಶಸ್ಸನ್ನು ಕಾಣಬಹುದು. ನಾವು ಕೆಲಸ ಮಾಡಲು ಪ್ರಾರಂಭಿಸಬೇಕು ಮತ್ತು ನಮ್ಮ ಸಿದ್ಧಾಂತವನ್ನು ಜನರಿಗೆ ತಲುಪಿಸಲು ಪ್ರಯತ್ನಿಸಬೇಕು” ಎಂದು ಹೇಳಿದರು.

”ನಾವು ಪಕ್ಷವನ್ನು ಗಟ್ಟಿ ಮಾಡಲು ಸಾಧ್ಯವಾದರೆ, ಯುವ ನಾಯಕರನ್ನು ಮುಂದಿನ ದಿನಗಳಲ್ಲಿ ನಾವು ನೋಡುತ್ತೇವೆ ಎಂದು ನನಗೆ ಖಾತ್ರಿಯಿದೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next