Advertisement

ಚಾಮರಾಜನಗರದಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ನೀಡುವೆ

06:25 AM Dec 25, 2017 | Team Udayavani |

ಮೈಸೂರು: ಭೂ ವಿವಾದದ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿರುವ ನಟ ದಿ.ವಿಷ್ಣುವರ್ಧನ್‌ ಸ್ಮಾರಕವನ್ನು ಚಾಮರಾಜನಗರ ಜಿಲ್ಲೆಯಲ್ಲಿ ನಿರ್ಮಿಸುವುದಾದರೆ ಸ್ಮಾರಕಕ್ಕೆ ಅಗತ್ಯವಾದ ಭೂಮಿ ನೀಡುವುದಾಗಿ ಉದಯೋನ್ಮುಖ ನಟ ಆರ್ವ ತಿಳಿಸಿದರು.

Advertisement

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಷ್ಣು ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಬೇಕೇ? ಬೆಂಗಳೂರಿನಲ್ಲಿ ನಿರ್ಮಿಸಬೇಕೆ ಎಂಬ ಚರ್ಚೆ ನಡೆಯುತ್ತಿದೆ. ಸ್ಮಾರಕ ನಿರ್ಮಾಣಕ್ಕೆ ಭೂಮಿಯ ಸಮಸ್ಯೆ ಎದುರಾಗಿದ್ದರೂ
ಸ್ಮಾರಕ ನಿರ್ಮಾಣದ ವಿಷಯದಲ್ಲಿ ಸರ್ಕಾರ ಹೆಚ್ಚಿನ ಗಮನ ನೀಡದಿರುವುದು ವಿಷ್ಣು ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಆದ್ದರಿಂದ ಚಾಮರಾಜನಗರ ಜಿಲ್ಲೆಯಲ್ಲಿ ಸ್ಮಾರಕ ನಿರ್ಮಿಸಲು ಮುಂದಾದರೆ ಸ್ಮಾರಕಕ್ಕೆ ಅಗತ್ಯ ಇರುವಷ್ಟು ಭೂಮಿಯನ್ನು ಜಿಲ್ಲೆಯ ಬಸವನಟ್ಟಿಯಲ್ಲಿ ನೀಡುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next