Advertisement

ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ..: ಸಿಎಂ ಬೊಮ್ಮಾಯಿ

11:16 AM Aug 01, 2022 | keerthan |

ಬೆಂಗಳೂರು: ಸಿದ್ದರಾಮೋತ್ಸವದಿಂದ ಬಿಜೆಪಿಗೆ ಯಾವುದೇ ರೀತಿಯಿಂದಲೂ ಆಪತ್ತಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಗ್ಗೆಯಾಗಲಿ, ಸಿದ್ದರಾಮೋತ್ಸವದಿಂದಾಗಲಿ ನಮಗೆ ಅಂಜಿಕೆ ಇಲ್ಲ. ನಾವು ನಿತ್ಯ ಸಿದ್ದರಾಮ ದೇವರ ಉತ್ಸವ ಮಾಡುವವರು ಎಂದು ವ್ಯಂಗ್ಯವಾಡಿದರು.

ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದೇವೆ. ಆದರೆ‌ ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ಬೇರೆ ರೀತಿ ಆಚರಣೆ ಮಾಡುತ್ತೇವೆ. ಈ ಬಗ್ಗೆ ಪಕ್ಷ ಹಾಗೂ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆ ಬಳಿಕ ಅಧಿಕೃತವಾಗಿ ಪ್ರಕಟಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಕೊಲೆಯಾದ ಫಾಝಿಲ್ – ಮಸೂದ್ ಮನೆಗಳಿಗೂ ಭೇಟಿ ಕೊಡುತ್ತೇನೆ: ಸಿಎಂ ಬೊಮ್ಮಾಯಿ

ಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಮಾಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಚರ್ಚೆ ಮಾಡಿಯೇ‌ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.

Advertisement

ಬಿಜೆಪಿ‌ ಮೂಲಗಳ ಪ್ರಕಾರ ಆಗಸ್ಟ್ 15 ರಿಂದ 30 ರ ವರೆಗೆ ರಾಜ್ಯಾದ್ಯಂತ ಜನೋತ್ಸವ ಕಾರ್ಯಕ್ರಮ‌ ನಡೆಸುವುದಕ್ಕೆ ವರಿಷ್ಠರೇ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next