Advertisement

Prajwal ರೇವಣ್ಣಗೂ ನಮಗೂ ಯಾವುದೇ ಸಂಬಂಧವಿಲ್ಲ: ಜಿ.ಟಿ.ದೇವೇಗೌಡ

08:59 PM May 28, 2024 | Team Udayavani |

ಮೈಸೂರು: ಪ್ರಜ್ವಲ್‌ ರೇವಣ್ಣಗೂ ನಮಗೂ ಸಂಬಂಧ ಇಲ್ಲ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಅವರನ್ನು ಈಗಾಗಲೇ ಪಕ್ಷದಿಂದ ಉಚ್ಚಾಟಿಸಿದ್ದು ಪ್ರಜ್ವಲ್‌ಗೂ ನಮಗೂ ಸಂಬಂಧವಿಲ್ಲ. ನನಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ ಎನ್ನುವ ಮೂಲಕ ಪ್ರಜ್ವಲ್‌ ವಿಚಾರದಲ್ಲಿ ಅಂತರ ಕಾಯ್ದುಕೊಂಡರು.

Advertisement

ಮಾಜಿ ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ಎಚ್‌.ಡಿ.ದೇವೇಗೌಡರು ಈಗಾಗಲೇ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದರು, ಅದರಂತೆ ಪ್ರಜ್ವಲ್‌ ಈಗಾಗಲೇ ಬರಬೇಕಿತ್ತು.ಇದೀಗ ಬರುವುದಾಗಿ ಹೇಳಿದ್ದಾರೆ. ಈ ನೆಲದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅವರು ಬಂದ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ. ನಾನು ಈಗಾಗಲೇ ತಿಳಿಸಿರುವಂತೆ, ಎಚ್‌.ಡಿ.ರೇವಣ್ಣ ಬಂಧನ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ. ಆದರೆ ಪ್ರಜ್ವಲ್‌ ವಿಚಾರದಲ್ಲಿ ಮಾತನಾಡಲು ಈಗಲೂ ನನಗೆ ಮನಸ್ಸು ಒಪ್ಪುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next