Advertisement

ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಹಣ ರಿಲೀಸ್ ಮಾಡಿದ್ದೇವೆ : ಯಡಿಯೂರಪ್ಪ

01:30 PM Jun 05, 2021 | Team Udayavani |

ಬೆಂಗಳೂರು : ನಾವು ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ಮಾಧ್ಯಮಗಳಲ್ಲಿ ಯಾವಾಗ ಹಣ ಬಿಡುಗಡೆ ಎಂದು ಕೇಳ್ತಿದ್ರು. ಇವತ್ತು ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಹಣ ರಿಲೀಸ್ ಮಾಡಿದ್ದೇವೆ. ಒಟ್ಟು 25 ಲಕ್ಷ ಕಾರ್ಮಿಕರಿಗೆ ಹಣ ವರ್ಗಾವಣೆ ಮಾಡ್ತಿದ್ದೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಒಟ್ಟು 749 ಕೋಟಿ ಹಣ ಬಿಡುಗಡೆ ಮಾಡ್ತಿದ್ದೇವೆ. 4 ಲಕ್ಷ ಜನರಿಗೆ ಇಂದು 110 ಕೋಟಿ ರಿಲೀಸ್ ಮಾಡಿದ್ದೇವೆ. ಅಸಂಘಟಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದರು.

ಸೆಕೆಂಡ್ ಪಿಯು ಮತ್ತು ಎಸ್ ಎಸ್ ಎಲ್ ಸಿ ಅಂಕಗಳನ್ನು ಆಧರಿಸಿ ಗ್ರೇಡ್ ವಿಚಾರವಾಗಿ ಮಾತನಾಡಿದ ಅವರು, ಇವೆಲ್ಲದರ ಬಗ್ಗೆ ಚರ್ಚೆ ನಡೆದಿದೆ. ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ. ಪರೀಕ್ಷೆಯನ್ನು ಜುಲೈನಲ್ಲಿ ಮಾಡಲು ಸಚಿವರು ಯೋಚಿಸ್ತಿದ್ದಾರೆ. ಕೆಲವರು ಪರೀಕ್ಷೆ ವಿರೋಧಿಸುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲದರ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next