Advertisement

ಗುಜರಾತ್‌ನಲ್ಲಿ ಗೆದ್ದು ಸೋತಿದ್ದೇವೆ 

06:30 AM Dec 19, 2017 | Team Udayavani |

ಯಾದಗಿರಿ: ಗುಜರಾತ್‌ ಚುನಾವಣೆಯಲ್ಲಿ ಗೆದ್ದು ಸೋತಿದ್ದೇವೆ. ಆದರೆ, ರಾಜ್ಯದಲ್ಲಿ ಅಮಿತ್‌ ಶಾ, ಮೋದಿ ಆಟ ನಡೆಯುವುದಿಲ್ಲ. 2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದ್ದು, ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಕೊಡುಗೆಯಾಗಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಮಾಚಲ ಪ್ರದೇಶದಲ್ಲಿ ನಿರೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದೆ. ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಅಲ್ಲಿಗೆ ಹೋದವರು ತಿಳಿಸಿದ್ದರು. ಆದರೆ, ಅಲ್ಲಿ ಕಳೆದ ಚುನಾವಣೆಗಿಂತ ಈ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಪಡೆದುಕೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ನಾಯಕತ್ವಕ್ಕೆ ಅಲ್ಲಿನ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. 

ಪ್ರಧಾನಿ ಮೋದಿ, ರಾಷ್ಟ್ರಾಧ್ಯಕ್ಷ ಆಮಿತ್‌ ಶಾ ಅದೇ ರಾಜ್ಯದವರಾಗಿದ್ದು, ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಸಾಕಷ್ಟು ರ್ಯಾಲಿ, ಸಮಾವೇಶ ನಡೆಸಿದರು. ಅಲ್ಲಿ ಅವರಿಗೆ ಯಾವುದೇ ಹಣಕಾಸಿನ ಸಮಸ್ಯೆ ಇರಲಿಲ್ಲ.ಮೋದಿ ಹೋದಲ್ಲೆಲ್ಲಾ ನಮ್ಮ ಮಾರ್ಯಾದೆ ಉಳಿಸಿ ಎಂದು ಭಾಷಣ ಮಾಡುತ್ತಿದ್ದರು. ಇದು ಅವರ ಗೆಲುವಿಗೆ ಕೆಲಸ ಮಾಡಿದೆ. ಗುಜರಾತ್‌ನಲ್ಲಿ ಮೋದಿ ಅವರ ಪ್ರಭಾವ ಕುಗ್ಗಿದೆ. ಅಲ್ಲಿನ ಜನ ಈಗಲೂ ನೋಟ್‌ ಅಮಾನ್ಯಿàಕರಣ ಹಾಗೂ ಜಿಎಸ್‌ಟಿಯನ್ನು ಒಪ್ಪಿಕೊಂಡಿಲ್ಲ. ಅಲ್ಲಿ ಮೋದಿ 
ಪ್ರಭಾವವಿದ್ದರೆ, ಕಾಂಗ್ರೆಸ್‌ ಸಂಪೂರ್ಣವಾಗಿ ಸೋಲಬೇಕಿತ್ತಿಲ್ಲವೇ ಎಂದು ಪ್ರಶ್ನಿಸಿದರು. ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್‌ ವಘೇಲಾ ಪಕ್ಷ ಬಿಟ್ಟು ಹೋಗಿದ್ದು ಪರಿಣಾಮ ಬೀರಿದೆ. ಗುಜರಾತ್‌ನಲ್ಲಿ ಪ್ರಾದೇಶಿಕ ಮಟ್ಟದ ನಾಯಕರ ಅವಶ್ಯಕತೆ ಇದೆ ಎಂದರು.

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಹೀಗಾಗಿ, ಗುಜರಾತ್‌ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. 2018ರ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ. ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದ್ದು, ರಾಹುಲ್‌ ಗಾಂಧಿ ಅವರಿಗೆ ಕೊಡುಗೆಯಾಗಿ ನೀಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next