Advertisement

ಇದು ಸ್ಪಂದನಶೀಲ ಸರ್ಕಾರ, ಹೀಗಾಗಿ ರೈತರ ಭಾವನೆಗೆ ಸ್ಪಂದಿಸಿದ್ದೇವೆ: ಸಿಎಂ ಬೊಮ್ಮಾಯಿ

11:02 AM Nov 19, 2021 | Team Udayavani |

ಬೆಂಗಳೂರು: ಇದು ಸ್ಪಂದನಶೀಲ ಸರ್ಕಾರ, ಹೀಗಾಗಿ ರೈತರ ಭಾವನೆಗೆ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕಾಯ್ದೆ ರದ್ದತಿಯ ಬಗ್ಗೆ ಹೇಳಿದರು.

Advertisement

ಇದನ್ನೂ ಓದಿ:ಸರ್ಕಾರಕ್ಕೆ ಕೊನೆಗೂ ಜ್ಞಾನೋದಯವಾಗಿದೆ: ಕುರುಬೂರು ಶಾಂತಕುಮಾರ್

ಪಂಚರಾಜ್ಯ ಚುನಾವಣಾ ಹಿನ್ನೆಲೆ ಕಾಯ್ದೆ ವಾಪಸ್ ಪಡೆದಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಂಚರಾಜ್ಯ ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ. ಹಿಂದೆ ನಡೆದ ಚುನಾವಣೆಯಲ್ಲೂ ನಾವು ಜಯ ಸಾಧಿಸಿದ್ದೇವೆ ಎಂದರು.

ಮಳೆ-ಹಾನಿ ಬಗ್ಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ವ್ಯಾಪಕವಾಗಿ ಅಕಾಲಿಕ ಮಳೆಯಾಗಿದೆ. ತಮಿಳುನಾಡು, ಆಂಧ್ರಪ್ರದೇಶ‌ಕ್ಕೆ ಅಂಟಿಕೊಂಡಿರುವ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಾವೇರಿ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಭತ್ತ, ಮೆಕ್ಕೆಜೋಳ ಸೇರಿದಂತೆ ಬೆಳೆಹಾನಿಯಾಗಿದೆ. ಈ ಬಗ್ಗೆ ನಿಖರವಾದ ಮಾಹಿತಿ ಪಡೆದುಕೊಳ್ಳುತ್ತೇನೆ. ಪ್ರಾಥಮಿಕ ಸರ್ವೇ ಮಾಡಿದ ನಂತರ ಪರಿಹಾರ ಕಾರ್ಯಕ್ಕೆ ಚಾಲನೆ ನೀಡಲು ಆದೇಶ ನೀಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next