Advertisement

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

10:58 PM Mar 08, 2021 | Team Udayavani |

ನವದೆಹಲಿ: ಕಳೆದ ವಾರ ಅತ್ಯಾಚಾರ ಪ್ರಕರಣದ ವಿಚಾರಣೆ ಸಂದರ್ಭ ತಮ್ಮ ನೇತೃತ್ವದ ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

Advertisement

ಸುಪ್ರೀಂ ಕೋರ್ಟ್‌ಗೆ ಮಹಿಳೆಯರ ಬಗ್ಗೆ ಅಪಾರ ಗೌರವವಿದೆ. ಆ ಪ್ರಕರಣದ ವಿಚಾರಣೆ ವೇಳೆ ಸಂತ್ರಸ್ತೆಯನ್ನು ವಿವಾಹವಾಗಲು ಸಿದ್ಧವೇ ಎಂದು ಆರೋಪಿಯನ್ನು ಪ್ರಶ್ನಿಸಲಾಗಿತ್ತೇ ವಿನಾ ವಿವಾಹವಾಗುವಂತೆ ಆರೋಪಿಗೆ ನಿರ್ದೇಶನ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಸಿಜೆಐ ಬೊಬ್ಡೆ ನೇತೃತ್ವದ ನ್ಯಾಯಪೀಠ, ಮಾ. 1ರಂದು ಅತ್ಯಾಚಾರ ಆರೋಪಿಯು ನಿರೀಕ್ಷಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಈ ಸಂಬಂಧ ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯೆ ಬೃಂದಾ ಕಾರಟ್‌ ಅವರು ಮುಖ್ಯ ನ್ಯಾಯಾಧೀಶರಿಗೆ ಪತ್ರವೊಂದನ್ನು ಬರೆದು ಈ ವಿವಾದಾತ್ಮಕ ಹೇಳಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದರು. ಅಲ್ಲದೆ ಸುಪ್ರೀಂ ಕೋರ್ಟ್‌ ನ್ಯಾಯಪೀಠದ ಈ ವಿವಾದಾತ್ಮಕ ಹೇಳಿಕೆ ಸಂಬಂಧ ಮುಖ್ಯ ನ್ಯಾಯಾಧೀಶರು ಕ್ಷಮೆಯಾಚಿಸಬೇಕೆಂಬ ಆಗ್ರಹಗಳು ಕೇಳಿಬಂದಿದ್ದವು. ಸೋಮವಾರ ಪ್ರತ್ಯೇಕ ಪ್ರಕರಣವೊಂದರ ವಿಚಾರಣೆಯ ಸಂದರ್ಭ ಮುಖ್ಯ ನ್ಯಾಯಮೂರ್ತಿಗಳು ಕಳೆದ ವಾರದ ಘಟನಾವಳಿಯ ಬಗೆಗೆ ಪ್ರಸ್ತಾವಿಸಿ ಈ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ :ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!

Advertisement

Udayavani is now on Telegram. Click here to join our channel and stay updated with the latest news.

Next