Advertisement

ನಮ್ಮ ಸರ್ಕಾರದ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ: ಶೋಭಾ ಕರಂದ್ಲಾಜೆ

12:20 PM Dec 27, 2020 | keerthan |

ಚಿಕ್ಕಮಗಳೂರು: ನಮ್ಮ ಸರ್ಕಾರದ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ ನೀಡುತ್ತೇವೆ. ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣವಾಗುತ್ತದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Advertisement

ದತ್ತಜಯಂತಿ ಗೆ ಚಾಲನೆ ನೀಡಿದ ಮಾತನಾಡಿದ ಅವರು, ದತ್ತಪೀಠದ ಮುಕ್ತಿಗೆ ಕಾನೂನಿನ ಅಡೆತಡೆಗಳಿವೆ. ಈ ಬಗ್ಗೆ ನಮ್ಮ ಕಾನೂನು ತಜ್ಞರು ಪರಿಶೀಲನೆ ಮಾಡುತ್ತಿದ್ದಾರೆ.  ರಾಮ ಮಂದಿರದಂತೆ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಾಣ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಮಾಸ್ಕ್ ಧರಿಸದವರ ವಿರುದ್ಧ ಬಿಎಂಸಿ ಅಭಿಯಾನ : ಒಂದೇ ದಿನ 26.47 ಲಕ್ಷ ರೂ. ದಂಡ ಸಂಗ್ರಹ

ದತ್ತಪಾದುಕೆ ಇರುವುದು ಚಿಕ್ಕಮಗಳೂರಿನಲ್ಲಿ. ಜಗತ್ತಿನಾದ್ಯಂತ ದತ್ತ ಭಕ್ತರಿದ್ದಾರೆ, ದತ್ತಪೀಠ ನಮ್ಮದಾಗಬೇಕೆಂದು ನಮ್ಮ ಸಂಕಲ್ಪ. ಮುಂದಿನ ದಿನದಲ್ಲಿ ದತ್ತಪೀಠ ನಮ್ಮದಾಗುವ ವಿಶ್ವಾಸವಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next