Advertisement

ಡಿ.5ರಂದು ಸಂಪುಟ ವಿಸ್ತರಣೆ ನಿರ್ಧಾರ: ಸಿದ್ದರಾಮಯ್ಯ ಹೇಳಿದ್ದೇನು?

11:27 AM Dec 02, 2018 | Team Udayavani |

ಹುಬ್ಬಳ್ಳಿ: ಪಾಪ, ಬಹುಮತ ಇಲ್ಲದಿದ್ದರೂ  ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಸಿಎಂ ಆಗಬೇಕೆಂಬ ಕನಸು ಈಡೇರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ.

Advertisement

ಡಿಸೆಂಬರ್‌ 5 ರಂದು ಸಮನ್ವಯ ಸಮಿತಿ ಸಭೆ ಇದೆ. ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ. ಕಾಂಗ್ರೆಸ್‌ ನಲ್ಲಿ ಯಾವ ಶಾಸಕರಿಗೂ ಅವಸರ ಇಲ್ಲ. ಬೆಳಗಾವಿ ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು. 

ಮೈತ್ರಿ ಸರ್ಕಾರದಲ್ಲಿ ಯಾವ ಗೊಂದಲವೂ ಇಲ್ಲ. ಸರ್ಕಾರ ಸುಭದ್ರವಾಗಿದೆ. 5 ವರ್ಷಗಳನ್ನು ಪೂರ್ಣ ಗೊಳಿಸುತ್ತೆ ಎಂದರು.

Advertisement

ಭ್ರಷ್ಟಾಚಾರದ ಕುರಿತು ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು  ಲೋಕ್‌ಪಾಲ್‌ ಜಾರಿ ಮಾಡಲಿ ಎಂದು ಸವಾಲು ಹಾಕಿದರು.

ಇದೇ ವೇಳೆ ನನ್ನ ವಿರುದ್ಧ ಯಾರೂ ದೂರು ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next