Advertisement

CM Siddaramaiah ರಾಜೀನಾಮೆ ಕೊಡೊವರೆಗೂ ಹೋರಾಟ ನಡೆಸುವೆವು: ಬಿ.ವೈ.ವಿಜಯೇಂದ್ರ

08:26 PM Aug 23, 2024 | Team Udayavani |

ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕಿದ್ದು, ಮುಂದಿನ ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ ಕೊಡುತ್ತಾರೆ. ಅಲ್ಲಿಯವರೆಗೂ ಹೋರಾಟ ನಡೆಸುತ್ತೇವೆ. ಹೀಗಾಗಿ ಅವರು ಸ್ವಲ್ಪ ತರಾತುರಿಯಲ್ಲಿ ಆತುರದ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ಕೂಪದಲ್ಲಿ ಸಿಲುಕಿದೆ. ಈ ಮಧ್ಯೆ ಜಿಂದಾಲ್‌ಗೆ ಭೂಮಿ ನೀಡಿದ್ದು ಮಾತ್ರವಲ್ಲ ಮತ್ತು ಬೆಂಗಳೂರಿನಲ್ಲಿ 12 ಸಾವಿರ ಕೋಟಿ ರೂ.ಅಲ್ಲ. 30-40 ಸಾವಿರ ಕೋಟಿ ರೂ.ವೆಚ್ಚದ ಟನಲ್ ಯೋಜನೆ ಇದಾಗಿದೆ. ಈ ಎಲ್ಲ ಯೋಜನೆಗಳಿಗೆ ತರಾತುರಿಯಲ್ಲಿ ಒಪ್ಪಿಗೆ ನೀಡಲಾಗುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಸಿದ್ದರಾಮಯ್ಯ ಸಿಎಂ ಆದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಕೇವಲ ಹೈಕಮಾಂಡ್‌ ಗೆ ಎಟಿಎಂ ಆಗಿ ಕೆಲಸ ಮಾಡಲು ಅಷ್ಟೇ. ಅಂದಿನ ನಮ್ಮ ಆರೋಪ ಇಂದು ಸಾಬೀತಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next