Advertisement

ನೆರೆ ವಿಚಾರವಾಗಿ ಬೊಬ್ಬೆ ಹಾಕುವುದು ನಿಲ್ಲಿಸಬೇಕು: ಯಡಿಯೂರಪ್ಪ

09:49 AM Oct 04, 2019 | keerthan |

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಅಪಾರ ಪ್ರಮಾಣದ ನಷ್ಟವುಂಟಾಗಿದೆ. ರಸ್ತೆ ಸೇತುವೆಗಳು ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ.

Advertisement

ಇದಕ್ಕೆ ದೊಡ್ಡ ಪ್ರಮಾಣದ ಅನುದಾನ ಬೇಕು. ಕೇಂದ್ರದವರು ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗಂತ ನಾವು ಕಾದು ಕುಳಿತಿಲ್ಲ. ನಮ್ಮ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದೇವೆ. ಆದರೆ ಈ ವಿಚಾರವಾಗಿ ವಿರೋಧ ಪಕ್ಷಗಳು ಬೊಬ್ಬೆ ಹಾಕುವುದು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂಪುಟ ಸಭೆ ನಂತರ ಬೆಳಗಾವಿ ಭಾಗಕ್ಕೆ ಹೋಗಿ ಅಲ್ಲಿ ಆಗಿರುವ ಅತಿವೃಷ್ಟಿ ಪರಿಸ್ಥಿತಿ ಬಗ್ಗೆ ಗಮನ ಹರಿಸುತ್ತೇವೆ.  ಮತ್ತೊಂದು ಬಾರಿ ದೆಹಲಿಗೆ ಹೋಗಿ ಪರಿಹಾರ ಕೇಳುತ್ತೇನೆ ಎಂದರು.

ಜೆಡಿಎಸ್, ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿವೆ. ಕೇಂದ್ರ ಸರ್ಕಾರದಿಂದ ನಾಲ್ಕಾರು ದಿನದಲ್ಲಿ ಹಣ ಬಿಡುಗಡೆ ಆಗುತ್ತದೆ ಸ್ವಲ್ಪ ತಾಳ್ಮೆ ಇರಲಿ. ಇದರಲ್ಲಿ ರಾಜಕೀಯ ಬೇಡ. ಪ್ರಧಾನಿ ವಿದೇಶೀ ಪ್ರವಾಸದಲ್ಲಿ ಇದ್ದ ಕಾರಣ ಸ್ವಲ್ಪ ಕಾಲಾವಕಾಶ ಬೇಕಿದೆ ಎಂದರು.

ನನ್ನ ಮತ್ತು ನಳಿನ್ ಮಧ್ಯೆ ಭಿನ್ನಾಭಿಪ್ರಾಯವಿಲ್ಲ

Advertisement

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ನನ್ನ ನಡುವೆ ಗುಲಗಂಜಿಯಷ್ಟು ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಂಮತ್ರಿ ಯಡಿಯೂರಪ್ಪ ಹೇಳಿದರು.

ಇಬ್ಬರು ಪರಸ್ಪರ ಸಮಾಲೋಚನೆ ಮಾಡಿ ತೀರ್ಮಾನ ಮಾಡುತ್ತಿದ್ದೇವೆ. ಕೆಲವು ಮಾಧ್ಯಮಗಳಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವರದಿ ಬಂದಿದ್ದು ಅದರಲ್ಲಿ ಸತ್ಯಾಂಶ ಇಲ್ಲ. ನಾವು ಇಬ್ಬರು ಸರಿ ಇದ್ದೇವೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಇಬ್ಬರೂ ಚರ್ಚೆ ಮಾಡಿಯೇ ತೀರ್ಮಾನ ಮಾಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next