Advertisement

ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ: ಡಿಸಿಎಂ ಡಿಕೆಶಿ ಭರವಸೆ

01:17 PM May 29, 2023 | Team Udayavani |

ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

Advertisement

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಮದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.

ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next