Advertisement

ಪ.ಬಂಗಾಳ: BJP ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುವೆ: ರಾಜು ಬ್ಯಾನರ್ಜಿ

08:57 PM Nov 25, 2020 | sudhir |

ದುರ್ಗಾಪುರ (ಪ.ಬಂಗಾಳ): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಹೇಳಿದ್ದಾರೆ.

Advertisement

ದುರ್ಗಾಪುರದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಗೂಂಡಾಗಳ ರಾಜ್ಯವಾದಂತಾಗಿದೆ. ಪೊಲೀಸರು ಇವರನ್ನು ನಿಗ್ರಹಿಸಲು ಏನೂ ಮಾಡುತ್ತಿಲ್ಲ. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ, ಇಂತಹ ಪೊಲೀಸರಿಗೆ ಯಾವ ನೆರವೂ ಸಿಕ್ಕುವುದಿಲ್ಲ ಅವರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ, ಬಂಗಾಳದಲ್ಲಿ ಮಹಿಳೆಯರಿಗೇ ಸುರಕ್ಷತೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲು ಸಿಎಂ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next