Advertisement

ಉಪಚುನಾವಣೆ ಫಲಿತಾಂಶ ಏನೇ ಬರಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಇದೆ; ದೇವೇಗೌಡ

09:24 AM Nov 06, 2019 | Team Udayavani |

ಬೆಂಗಳೂರು: ಹದಿನೈದು ಕ್ಷೇತ್ರಗಳ ಚುನಾವಣಾ ಫಲಿತಾಂಶ ಏನೇ ಬರಲಿ ನಿಮ್ಮ ಸರ್ಕಾರದ ಜತೆ ಜೆಡಿಎಸ್ ಇರಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಈ ರೀತಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಭರವಸೆ ನೀಡಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ.

Advertisement

ಇತ್ತೀಚೆಗಷ್ಟೇ ಅನರ್ಹ ಶಾಸಕರು ಹಾಗೂ ಸಿದ್ದರಾಮಯ್ಯ ಕುರಿತ ವಿಚಾರದಲ್ಲಿ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೂಡಾ ಬಿಜೆಪಿ ಸರ್ಕಾರ ಬೀಳಿಸಲು ಅವಕಾಶ ಕೊಡಲ್ಲ ಎಂಬುದಾಗಿ ಹೇಳಿದ್ದರು.

ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರು ಇತ್ತೀಚೆಗೆ ಸಿಎಂ ಬಿಎಸ್ ವೈ ಜತೆಗೆ ನಡೆಸಿದ ದೂರವಾಣಿ ಸಂಭಾಷಣೆಯಲ್ಲಿಯೂ ಬಿಜೆಪಿ ಸರ್ಕಾರ ಅಸ್ಥಿರಗೊಳಿಸಲು ಅವಕಾಶ ಕೊಡುವುದಿಲ್ಲ ಎಂದು ಭರವಸೆ ನೀಡಿದ್ದಾರೆನ್ನಲಾಗಿದೆ. ನಿಮ್ಮ ಸರ್ಕಾರದ ಜತೆ ಜೆಡಿಎಸ್ ಇರಲಿದೆ ಎಂಬುದಾಗಿ ಅಭಯ ನೀಡಿರುವುದಾಗಿ ವರದಿ ವಿವರಿಸಿದೆ.

ಕಾಂಗ್ರೆಸ್, ಜೆಡಿಎಸ್ ಸರ್ಕಾರ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ. ಸರ್ಕಾರ ಪತನವಾದ ನಂತರ ಎಲ್ಲಾ ಅಂಶಗಳು ಗಮನಕ್ಕೆ ಬರುತ್ತಿದೆ. ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಳ್ಳುವುದು ಬಿಡುವುದು ಬೇರೆ ಮಾತು. ಆದರೆ ಸದ್ಯದ ಸ್ಥಿತಿಯಲ್ಲಿ ನಾವು ನಿಮ್ಮೊಂದಿಗೆ (ಬಿಜೆಪಿ) ಇದ್ದೇವೆ ಎಂದು ದೇವೇಗೌಡರು ತಿಳಿಸಿದ್ದಾರೆನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next