Advertisement

ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ: ಶೃಂಗೇರಿ ಯಾಗದ ಬಳಿಕ ಡಿಕೆ ಶಿವಕುಮಾರ್ ಹೇಳಿಕೆ

02:02 PM Apr 23, 2023 | |

ಚಿಕ್ಕಮಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ. ಕಾರ್ಯಕರ್ತರ ಸ್ಪೂರ್ತಿ, ದೇವರ ಅನುಗ್ರಹದಿಂದ ಕಾಂಗ್ರೆಸ್ ಗೆ ಹೊಸ ಶಕ್ತಿ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

Advertisement

ಶೃಂಗೇರಿಯಲ್ಲಿ ಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಸ್ಸಿನ ಶಾಂತಿ, ನೆಮ್ಮದಿ, ರಾಜ್ಯದಲ್ಲಿ ಪಕ್ಷ ಅಧಿಕಾರ ಬರಬೇಕು, ಜನಸೇವೆಗೆ ಅವಕಾಶಕ್ಕಾಗಿ ಬೇಡಿಕೊಂಡಿದ್ದೇನೆ. ಎಲ್ಲಾ ಕಡೆ ದೇವರ ದರ್ಶನ ಮಾಡಿದ್ದೇನೆ, ಆಶೀರ್ವಾದವಾಗಿದೆ, ದೇವರ ಸನ್ನಿದಿಯಿಂದಲೇ ಪ್ರಚಾರ ಕೂಡ ಆರಂಭಿಸುತ್ತಿದ್ದೇವೆ ಎಂದರು.

ಬಿಜೆಪಿಯವರು ಯಡಿಯೂರಪ್ಪನವರನ್ನು ಉಪಯೋಗಿಸಿ ತೆಗೆದರು, ಅವರ ಕಣ್ಣಲ್ಲಿ ನೀರು ಹಾಕಿಸಿದರು. ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಶಾಸಕರು, ಮಂತ್ರಿಗಳು ಸಾಕ್ಷಿ ಬಿಟ್ಟು ಹೋಗಿದ್ದಾರೆ ಎಂದರು.

ಇದನ್ನೂ ಓದಿ:ಎ.27 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ Rahul Gandhi ರೋಡ್ ಶೋ

ವರುಣ ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗುತ್ತೇನೆ, ಇನ್ನು ದಿನಾಂಕ ನಿಗದಿಯಾಗಿಲ್ಲ. ವರುಣಾ ಮಾತ್ರವಲ್ಲ, ಯಾರು ಎಲ್ಲಿಗೆ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ. ಖರ್ಗೆ, ರಾಹುಲ್, ಸಿದ್ದು, ಪ್ರಿಯಾಂಕ ಎಲ್ಲರೂ ಪ್ರಚಾರ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next