Advertisement

Guarantee ಯೋಜನೆಯಿಂದ ಲೋಕಸಭೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ಎಚ್.ಕೆ ಪಾಟೀಲ್

02:25 PM Nov 11, 2023 | Team Udayavani |

ಬಳ್ಳಾರಿ: ಕಾಂಗ್ರೆಸ್ ಪಕ್ಷದ ಸಂಘಟನೆ ಗಟ್ಟಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜನರು ನೋಡಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಜನರಿಗೆ ಅನುಕೂಲವಾಗಿದೆ. ಇದನ್ನು ನೋಡಿ ಬಿಜೆಪಿ ತತ್ತರಿಸಿ ಹೋಗಿ ನಡುಕ ಪ್ರಾರಂಭವಾಗಿದೆ. ಗ್ಯಾರಂಟಿ ಕಾರ್ಯಕ್ರಮದಿಂದ ಲೋಕಸಭೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

Advertisement

ಬಳ್ಳಾರಿಯಲ್ಲಿ ಜಿಲ್ಲಾ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ರಾಜ್ಯಾಧ್ಯಕ್ಷರನ್ನು ನೇಮಿಸಲು ಇಷ್ಟು ವರ್ಷವಾಯ್ತು, ಅದರಿಂದ ನಮಗೇನು ಪರಿಣಾಮವಾಗದು ಎಂದರು.

ಕೇಂದ್ರದ ಬರ ತಂಡ ಬಂದು ಹೋಗಿದೆ. ಸರ್ಕಾರದ ಜೊತೆಗೆ ಚರ್ಚೆ ಮಾಡಿದೆ. ಕೇಂದ್ರ ಸರ್ಕಾರ 3700 ಕೋಟಿ ಬಿಡುಗಡೆ ಮಾಡಬೇಕಿತ್ತು. ಆದರೆ ನಯಾಪೈಸೆ ಮಾಡಿಲ್ಲ. ಪರಿಹಾರ ಒತ್ತಾಯ ಮಾಡಬೇಕಾದ ಬಿಜೆಪಿ ನಾಯಕರು ಬರ ಅಧ್ಯಯನ ಮಾಡುತ್ತಿದ್ದಾರೆ. ಮುಂಗಾರು ಮುಗಿದು ಹಿಂಗಾರು ಸಮಯದಲ್ಲಿ ಬರ ಅಧ್ಯಯನ ಮಾಡಲು ಹೊರಟಿದ್ದಾರೆ. ಜನರ ಬಗ್ಗೆ ಕಾಳಜಿ ಇಲ್ಲ ಸಂಸದರು ಪರಿಹಾರದ ಬಗ್ಗೆ ಮಾತನಾಡ್ತಿಲ್ಲ. ರಾಜಕೀಯ ಕಡೆ ಗಮನವಿದೆ ಜನರ ಕಡೆ ಗಮನವಿಲ್ಲ ಎಂದು ಸಚಿವರು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next