Advertisement

ಕುಂದಗೋಳ-ಚಿಂಚೋಳಿಯಲ್ಲಿ ಗೆಲ್ಲುವುದು ನಾವೇ: ಪರಮೇಶ್ವರ್‌

11:19 PM May 04, 2019 | Team Udayavani |

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಎರಡೂ ಮತಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಬಿಜೆಪಿ ಸೋಲುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌ ಹೇಳಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ವರದಿ ಹಾಗೂ ವಿಶ್ಲೇಷಣೆಗಳ ಆಧಾರದ ಮೇಲೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ಮೇ 23ರಂದು ಫ‌ಲಿತಾಂಶ ಬಂದ ಬಳಿಕ ಸರಕಾರ ಬೀಳುತ್ತದೆ ಎನ್ನುತ್ತಿದ್ದಾರೆ.

ಮೇ 24ರಂದು ಹೊಸ ಸರಕಾರ ರಚಿಸುತ್ತೇವೆಂದು ಹೇಳುತ್ತಿದ್ದಾರೆ. ಆದರೆ, ಸರಕಾರಕ್ಕೆ ಯಾವುದೇ ತೊಂದರೆಯಾಗಲ್ಲ. ಲೋಕಸಭಾ ಚುನಾವಣೆ ಫ‌ಲಿತಾಂಶ ಮೈತ್ರಿ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಮೇ 24ರಂದು ನಾವು ಏನೆಂಬುದನ್ನು ಅವರಿಗೆ ತೋರಿಸುತ್ತೇವೆ ಎಂದರು.

ಭೋಜನ ಕೂಟ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಅವರು ವರದಿ ತರಿಸಿಕೊಳ್ಳಲಿದ್ದು, ಶಿಸ್ತು ಸಮಿತಿ ಹಾಗೂ ಕೆಪಿಸಿಸಿ ಪರಿಶೀಲನೆ ನಡೆಸಿ, ವರದಿಯಲ್ಲಿನ ಸಾಧಕ-ಬಾಧಕ ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next