Advertisement

ನಾವು ಗಾಂಧಿ ಕುಟುಂಬಕ್ಕೆ ಗುಲಾಮರಂತೆ ಕೆಲಸ ಮಾಡುತ್ತೇವೆ: ಡಿ.ಕೆ.ಶಿವಕುಮಾರ್

01:08 PM Jul 26, 2022 | Team Udayavani |

ಬೆಂಗಳೂರು: ಗಾಂಧಿ ಕುಟುಂಬ ಈ ದೇಶಕ್ಕಾಗಿ ಗುಲಾಮರಂತೆ ಕೆಲಸ ಮಾಡಿದೆ. ಆ ಹಿನ್ನೆಲೆಯಲ್ಲಿ ನಾವು ಗಾಂಧಿ ಕುಟುಂಬಕ್ಕೆ ಗುಲಾಮರಂತೆ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

Advertisement

ಗಾಂಧಿ ಕುಟುಂಬದ ಗುಲಾಮರ ರೀತಿಯಲ್ಲಿ ಕಾಂಗ್ರಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ವ್ಯಂಗ್ಯ ಹೇಳಿಕೆಗಳಿಗೆ ಅವರು ತಿರುಗೇಟು ನೀಡಿದರು.

ಬಿಜೆಪಿ ಪಕ್ಷದವರು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಆದರೆ ಗಾಂಧಿ ಕುಟುಂಬ ದೇಶಕ್ಕಾಗಿ ಜೈಲು ಶಿಕ್ಷೆ ಕೂಡ ಅನುಭವಿಸಿದೆ. ಅವರಿಗಾಗಿ ಕಾಂಗ್ರಸ್ ಕಾರ್ಯಕರ್ತರು ಟೊಂಕ ಕಟ್ಟಿ ನಿಲ್ಲಲಿದ್ದಾರೆ ಎಂದರು.

ಸೋನಿಯಾ ಗಾಂಧಿ ನಮ್ಮ ತಾಯಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಮ್ಮ ತಾಯಿ, ರಾಹುಲ್ ಗಾಂಧಿ ನಮ್ಮ ಸಹೋದರ. ಈಗಾಗಲೇ ನಾನು, ಚಿದಂಬರಂ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಸೇಡಿನ ಹಿನ್ನೆಲೆಯಲ್ಲಿ ಜೈಲಿಗೆ ಕಳಿಸಲಾಯಿತು. ಇದೀಗ ಸೋನಿಯಾ ಮತ್ತು ರಾಹುಲ್ ಗಾಂಧಿ ವಿರುದ್ದ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:ಮದುವೆ‌ ಯೋಚನೆ ಸದ್ಯಕ್ಕಿಲ್ಲ ಆದರೆ.. ʼಮೈನಾʼ ಬೆಡಗಿ ನಿತ್ಯಾ ಅಭಿಮಾನಿಗಳಿಗೆ ಹೇಳಿದ್ದೇನು ?

Advertisement

ಇ.ಡಿ.ತನಿಖೆ ಅಂದರೆ ಅದು ಕೇವಲ ವಿರೋಧ ಪಕ್ಷದ ನಾಯಕರ ವಿರುದ್ಧವೆ ಎಂದು ಪ್ರಶ್ನಿಸಿದ ಅವರು ಬಿಜೆಪಿ ನಾಯಕರುಗಳ ಮೇಲೆ ಏಕೆಯಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next