Advertisement

ಬಳೆ ತೊಟ್ಟುಕೊಳ್ಳಿ:ಶೋಭಾಗೆ ಟ್ವೀಟ್‌ ಮೂಲಕ ಸಿದ್ದರಾಮಯ್ಯ ತಿರುಗೇಟು

08:56 AM May 17, 2019 | Team Udayavani |

ಬೆಂಗಳೂರು: ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಟೀಕಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಜಿ ಮುಖ್ಯಮಂತ್ರಿ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

Advertisement

ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು ಎಂದು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಅವರ ಪಕ್ಷದ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ.ಕೆಲಸ ಮಾಡಲು ಆಗದಿದ್ದರೆ ಅವರು ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಶೋಭಾ ಕರಂದ್ಲಾಜೆ ಸುದ್ದಿಗಾರರ ಎದುರು ಕಿಡಿ ಕಾರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next