Advertisement

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

08:09 AM Nov 03, 2021 | Team Udayavani |

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭಫ‌ಲ. ದೀರ್ಘ‌ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ನೂತನ ಮಿತ್ರರ ಭೇಟಿ. ಸುಖ ಸಂತೋಷದಿಂದ ಕೂಡಿದ ದಿನ. ಆರ್ಥಿಕವಾಗಿ ಸ್ತ್ರೀ ಸಹಾಯ.

Advertisement

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾದಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ವಿದ್ಯಾರ್ಥಿಗಳಿಗೆ, ಅಧ್ಯಯನ ನಿರತರಿಗೆ ಸೂಕ್ತ ಸಹಾಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ. ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ, ಧಾರ್ಮಿಕ ಕಾರ್ಯಗಳಿಗೆ, ದಾನ ಧರ್ಮಾಧಿಗಳಿಗೆ ಧನ ವ್ಯಯಿಸಿದ ತೃಪ್ತಿ.

Advertisement

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಾಂಸಾರಿಕ ವಿಚಾರದಲ್ಲ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಮಾರ್ಗದರ್ಶನ.

ವೃಶ್ಚಿಕ: ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.

ಧನು: ಸಂಪಾದನೆಯೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ ಚತುರತೆಯಿಂದ ಜನರಂಜನೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ: ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರೋಗ್ಯ ಗಮನಿಸಿ.

Advertisement

Udayavani is now on Telegram. Click here to join our channel and stay updated with the latest news.

Next