Advertisement

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:55 AM Sep 22, 2021 | Team Udayavani |

ಮೇಷ: ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು. ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು.

Advertisement

ವೃಷಭ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸುವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ.

ಮಿಥುನ: ಮಕ್ಕಳಿಂದ ಸುಖ. ಬಂಧುಜನರೊಂದಿಗೆ ವಿಲಾಸ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ.

ಕರ್ಕ: ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.

ಸಿಂಹ: ಆರೋಗ್ಯ ಗಮನಿಸಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರ ಪ್ರಗತಿ.

Advertisement

ಕನ್ಯಾ: ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಕೆ. ವಾಕ್‌ಚತುರತೆ ಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋಧನೆ.

ತುಲಾ: ಆರೋಗ್ಯ ವೃದ್ಧಿ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯ ಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ: ನಯವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ.

ಮೀನ: ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯ ಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಆರೋಗ್ಯ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next