Advertisement

ದ.ಕ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದು: ಸರ್ಕಾರದ ಆದೇಶ

06:51 PM Sep 09, 2021 | Team Udayavani |

ಬೆಂಗಳೂರು : ದ.ಕ ಕನ್ನಡ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟ್ ದರ ಇರುವ ಕಾರಣ ವೀಕೆಂಡ್ ಕರ್ಫ್ಯೂ ಹಿಂತೆಗೆದುಕೊಳ್ಳುವ ಕುರಿತು ಸರ್ಕಾರ ಆದೇಶ ನೀಡಿದೆ. ಒಂದು ವೇಳೆ ಮತ್ತೆ ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೆ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲು ಆಯಾ ಜಿಲ್ಲಾಡಳಿತಕ್ಕೆ ಸರ್ಕಾರ ಅಧಿಕಾರವನ್ನು ನೀಡಿದೆ.

ಅಗತ್ಯವಿದ್ದಲ್ಲಿ ಜಿಲ್ಲಾಧಿಕಾರಿಗಳು ವೀಕೆಂಡ್ ಕರ್ಫ್ಯೂನಂಥ ನಿಯಮವನ್ನು ಜಾರಿಗೊಳಿಸಬಹುದೆಂದು ಸರ್ಕಾರ ಆದೇಶದಲ್ಲಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next