Advertisement

ವಾರಾಂತ್ಯ ಕರ್ಫ್ಯೂಗೆ ಭಟ್ಕಳದಲ್ಲಿ ಉತ್ತಮ ಪ್ರತಿಕ್ರಿಯೆ

03:57 PM Jan 08, 2022 | Team Udayavani |

ಭಟ್ಕಳ: ರಾಜ್ಯ ಸರಕಾರ ವಿಧಿಸಿದ ವಾರಾಂತ್ಯ ಕರ್ಫ್ಯೂಗೆ ಭಟ್ಕಳ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಬೆಳಿಗ್ಗೆಯಿಂದಲೇ ಅಗತ್ಯ ವಸ್ತುಗಳ ಮಳಿಗೆಗಳನ್ನು ಬಿಟ್ಟು ಉಳಿದ ಎಲ್ಲಾ ಅಂಗಡಿಗಳೂ ಬಂದ್ ಇದ್ದು ಜನ ಸಂಚಾರ ಅತ್ಯಂತ ವಿರಳವಾಗಿತ್ತು.

Advertisement

ನಗರದಲ್ಲಿಯ ಹೆಚ್ಚಿನ ಅಂಗಡಿಗಳು ಬಂದ್ ಇದ್ದು ಜನರ ಓಡಾಟ ಕೂಡಾ ತೀರಾ ವಿರಳವಾಗಿದ್ದು ಅಗತ್ಯ ವಸ್ತುಗಳ ಮಳಿಗೆಗಳನ್ನು ಬಿಟ್ಟರೆ ಇತರೆ ಎಲ್ಲಾ ಅಂಗಡಿಗಳೂ ಕೂಡಾ ಬಂದ್ ಇದ್ದುದರಿಂದ ಜನ ಪೇಟೆಗೆ ಬರುವ ಗೋಜಿಗೇ ಹೋಗಿಲ್ಲ. ಕೆಲವೊಂದು ಹೋಟೆಲ್‌ಗಳು ಪಾರ್ಸೆಸ್ ಸರ್ವಿಸ್ ನೀಡಿದ್ದರೆ ಇನ್ನೂ ಕೆಲವು ಹೋಟೇಲ್‌ಗಳು ಬಾಗಿಲೇ ತೆರೆಯದೇ ಬಂದ್ ಮಾಡಿದ್ದು ಕಂಡು ಬಂದಿದೆ. ಕೆಲವು ಕಡೆಗಳಲ್ಲಿ ಹಣ್ಣು, ತರಕಾರಿ ಅಂಗಡಿಗಳು ತೆರೆದಿದ್ದರೂ ಕೂಡಾ ಗಿರಾಕಿಗಳೇ ಇಲ್ಲದೇ ಕಾಯುವಂತಾಗಿತ್ತು. ಜನರು ರಸ್ತೆಗಿಳಿಯದೇ ಇರುವುದರಿಂದ ಪೊಲೀಸ್ ಇಲಾಖೆಯ ಕೆಲಸ ಸುಗಮವಾಗಿತ್ತು. ಆದರೂ ಅಲ್ಲಲ್ಲಿ ನಿಂತು ಓಡಾಡುವವರನ್ನು ವಿಚಾರಿಸುತ್ತಿರುವುದು ಕಂಡು ಬಂದಿದೆ.

ಎರಡನೇ ಶನಿವಾರವಾದ್ದರಿಂದ ಸರಕಾರಿ ಕಚೇರಿಗಳು, ಬ್ಯಾಂಕುಗಳಿಗೆ ರಜೆ ಇದ್ದುದರಿಂದ ಜನರ ಓಡಾಟ ಇನ್ನಷ್ಟು ವಿರಳವಾಗಲು ಕಾರಣವಾಗಿತ್ತು. ಕೆಲವೊಂದು ಸೇವೆಗಳಿಗೆ ಹಾಗೂ ಆಸ್ಪತ್ರೆಗೆ ಹೋಗುವವರಿಗೆ, ವ್ಯಾಕ್ಸಿನೇಶನ್ ತೆಗೆದುಕೊಳ್ಳಲು ಹೋಗುವವರಿಗೆ ವಿನಾಯಿತಿ ಇದ್ದರೂ ಸಹ ಜನ ಹೆಚ್ಚಾಗಿ ಹೊರಗೆ ಬರದೇ ಇರುವುದರಿಂದ ರಸ್ತೆ ಖಾಲಿ ಖಾಲಿಯಾಗಿತ್ತು. ಒಟ್ಟಾರೆ ಬೆಳಿಗ್ಗೆಯಿಂದಲೇ ಜನ ಸಂಚಾರ ಇಲ್ಲದೇ ಬಂದ್ ಸಂಪೂರ್ಣ ಯಶಸ್ವೀಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next