Advertisement

Karadi Sanganna ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ಶಿವರಾಜ ತಂಗಡಗಿ

10:07 PM Mar 22, 2024 | Team Udayavani |

ಕೊಪ್ಪಳ: ಸಂಸದ ಸಂಗಣ್ಣ ಕರಡಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದ್ದು, ಅವರು ಕಾಂಗ್ರೆಸ್‌ ಬಂದರೆ ಸ್ವಾಗತಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಕೆಟ್‌ ಕೈ ತಪ್ಪಿದ ವೇಳೆ ಅವರೊಂದಿಗೆ ಸೌಜನ್ಯಕ್ಕೆ ಮಾತನಾಡಿದ್ದೇನೆ. ಪಕ್ಷಕ್ಕೆ ಆಹ್ವಾನ ಮಾಡಿಲ್ಲ. ಆದರೆ ಈಗ ಅವರು ಪಕ್ಷಕ್ಕೆ ಬರುತ್ತಾರೆ ಎಂದರೆ ನಾನೇ ಆಹ್ವಾನ ನೀಡುತ್ತೇನೆ. ಅವರ ಅನುಯಾಯಿಗಳು ಸಾಕಷ್ಟು ಜನ ಬರುವವರಿದ್ದಾರೆ.

ಕರಡಿ ಅವರ ಮನೆಗೂ ತೆರಳಿ ಭೇಟಿ ಮಾಡಿ ಆಹ್ವಾನ ನೀಡುತ್ತೇನೆ. ಗಂಗಾವತಿ ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿಗೆ ಯಾವುದೇ ಅಸಮಾಧಾನವಿಲ್ಲ. ಅವರ ಜತೆ ಮಾತನಾಡಿ ಅಸಮಾಧಾನ ಬಗೆಹರಿಸಲಾಗಿದೆ. ಶೀಘ್ರವೇ ಅವರು ಪ್ರಚಾರಕ್ಕೆ ಬರಲಿದ್ದಾರೆ. ಕುಟುಂಬ ರಾಜಕಾರಣ ಎಲ್ಲ ಪಕ್ಷದಲ್ಲಿಯೂ ಇದೆ. ಅದೇನು ಹೊಸತಲ್ಲ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರು. ಇಡೀ ದೇಶ ಸುತ್ತುವ ಜವಾಬ್ದಾರಿ ಅವರ ಮೇಲಿದೆ.

ಹಾಗಾಗಿ ಅವರು ಸ್ಪರ್ಧೆ ಮಾಡಿಲ್ಲ. ಈಶ್ವರಪ್ಪ ಅವರ ಮಾತನ್ನು ಬಿಜೆಪಿ ನಾಯಕರೇ ಕೇಳುತ್ತಿಲ್ಲ. ನಾವು ಏಕೆ ಅವರ ಮಾತಿಗೆ ಬೆಲೆ ಕೊಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next