Advertisement

ಬಿಎಸ್ ವೈ ಹೇಳಿಕೆಗೆ ಸ್ವಾಗತ; ಪತ್ರಿಕಾಗೋಷ್ಠಿಯಲ್ಲಿ ದೇವೇಗೌಡರು ಹೇಳಿದ್ದೇನು?

09:18 AM Jul 28, 2019 | Nagendra Trasi |

ಬೆಂಗಳೂರು:ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಕುಮಾರಸ್ವಾಮಿ ಸಿಎಂ ಆಗಿ ಎಷ್ಟು ನೋವು ತಿಂದಿದ್ದಾರೆ, ಎಷ್ಟು ಕಷ್ಟ ಪಟ್ಟಿದ್ದಾರೆ ಎಲ್ಲಾ ಗೊತ್ತಿದೆ. ಸರಕಾರ ಹೋದರೂ ಚಿಂತೆ ಇಲ್ಲ. ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

Advertisement

ಶನಿವಾರ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಶಾಸಕ ಗೋಪಾಲಯ್ಯ ನಮ್ಮ ವಿರುದ್ಧ ಹೇಳಿಕೆ ನೀಡಿ ಬಾಂಬೆಗೆ ಹೋಗಿದ್ದಾರೆ. ಬಂಡಾಯ ಶಾಸಕರ ಬಗ್ಗೆ ಸ್ಪೀಕರ್ ಒಂದು ವಾರದೊಳಗೆ ತೀರ್ಮಾನ ಕೈಗೊಳ್ಳುತ್ತಾರೆ. ಚುನಾವಣೆ ಇರುತ್ತೋ, ಇಲ್ಲವೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ತುಂಬಾ ನೋವು ಅನುಭವಿಸಿದ್ದಾರೆ. ಜೆಪಿ ಭವನದಲ್ಲಿನ ಜೆಡಿಎಸ್ ಕಚೇರಿಯಲ್ಲಿ ಕುಮಾರಸ್ವಾಮಿ 15 ನಿಮಿಷಗಳ ಕಾಲ ಅತ್ತಿದ್ದರು ಎಂದು ದೇವೇಗೌಡರು ಬೇಸರದ ನುಡಿಯನ್ನಾಡಿದರು.

ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮುಂದುವರಿಸುವ ವಿಚಾರದ ಬಗ್ಗೆ ಈಗ ಚರ್ಚೆ ಯಾಕೆ? ಆ ಕುರಿತು ಮುಂದೆ ನೋಡೋಣ ಎಂದರು.

ಬಿಎಸ್ ವೈ ಹೇಳಿಕೆಗೆ ಸ್ವಾಗತ:

Advertisement

ತಾನು ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪನವರ ಹೇಳಿಕೆಯನ್ನು ಸ್ವಾಗತಿಸುವುದಾಗಿ ದೇವೇಗೌಡರು ಈ ಸಂದರ್ಭದಲ್ಲಿ ಹೇಳಿದರು.  ಬಿಜೆಪಿಗೆ ವಿಷಯಾಧಾರಿತವಾಗಿ ಬೆಂಬಲ ನೀಡುತ್ತೇವೆ. ಎಲ್ಲವನ್ನೂ ತಿರಸ್ಕರಿಸಲು ಸಾಧ್ಯವಿಲ್ಲ. ಧನವಿನಿಯೋಗ ವಿಧೇಯಕಕ್ಕೆ ಎಲ್ಲರೂ ಒಪ್ಪಿದರೆ ನಾವೂ ಸಹಕಾರ ನೀಡುತ್ತೇವೆ ಎಂದರು.

ನಾವು ಪರಿಣಾಮಕಾರಿಯಾಗಿ ವಿರೋಧ ಪಕ್ಷದಲ್ಲಿ ಕೆಲಸ ಮಾಡಲು ಪಕ್ಷದ ಶಾಸಕರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇನೆ, 30 ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಕುಮಾರಸ್ವಾಮಿಗೆ 20% ಮತ ಕೊಟ್ಟಿರುವ ಮತದಾರರು ಇದ್ದಾರೆ ಎಂದು ತಿಳಿಸಿದರು.

ಜಿಟಿ ದೇವೇಗೌಡರ ಹೇಳಿಕೆ ವಿಚಾರ:

ನಾವು ರಚನಾತ್ಮಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದೇನೆ. ಫೈನಾನ್ಸ್ ಬಿಲ್ ಪಾಸ್ ಮಾಡಲಿ, ಕುಮಾರಸ್ವಾಮಿ ಮಂಡಿಸಿದ ಬಜೆಟ್ ಅದು. ಹೀಗಾಗಿ ಜಿಟಿ ದೇವೇಗೌಡರು ಹೇಳಿದ ವಿಚಾರ ದೊಡ್ಡ ವಿಷಯವೇ ಅಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next