Advertisement

ನೂತನ ನ್ಯಾಯಮೂರ್ತಿಗಳಿಗೆ ವಕೀಲರ ಸಂಘದಿಂದ ಸ್ವಾಗತ

11:50 AM Jun 05, 2018 | Team Udayavani |

ಬೆಂಗಳೂರು: ರಾಜ್ಯದ ನ್ಯಾಯಾಂಗ ವ್ಯವಸ್ಥೆಯನ್ನು ದೇಶಕ್ಕೆ ಮಾದರಿಯನ್ನಾಗಿ ಮಾಡುವ ಅಭಿಲಾಷೆಯಿದೆ ಎಂದು ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹೇಳಿದ್ದಾರೆ.

Advertisement

ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ನ್ಯಾ. ಮೊಹಮದ್‌ ನವಾಜ್‌ ಹಾಗೂ ಎಚ್‌.ಟಿ.ನರೇಂದ್ರಪ್ರಸಾದ್‌ ಅವರಿಗೆ ಸೋಮವಾರ ಬೆಂಗಳೂರು ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ನ್ಯಾ.ಮೊಹಮದ್‌ ನವಾಜ್‌ ಮಾತನಾಡಿ, ಕಳೆದ 28 ವರ್ಷಗಳಿಂದ ಹೈಕೋರ್ಟ್‌ ನನಗೆ  ಮೊದಲ ಮನೆಯಾಗಿತ್ತು. ವಕೀಲಿಕೆ ಆರಂಭದಲ್ಲಿ ಕೋರ್ಟ್‌ ಹಾಲ್‌ನಲ್ಲಿ ಕುಳಿತು ಕಲಾಪಗಳನ್ನು ವೀಕ್ಷಿಸುತ್ತಿದೆ. ಹಿರಿಯ ವಕೀಲರ ವಾದ-ಪ್ರತಿವಾದ  ಕೇಳುತ್ತಾ ಎಲ್ಲರ ಸಹಕಾರದೊಂದಿಗೆ ಯಶಸ್ವಿ ವಕೀಲನಾದೆ.

ಇದೀಗ ಇದೇ  ಕೋರ್ಟ್‌ಗೆ ನ್ಯಾಯಮೂರ್ತಿಯಾಗಿರುವುದು ಮರೆಯಲಾರದ ಅನುಭವ ಎಂದರು. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್‌, ಉಪಾಧ್ಯಕ್ಷ  ಆರ್‌.ಜಿ.ಹಾಲೇಶ್‌,  ಪ್ರಧಾನ ಕಾರ್ಯದರ್ಶಿ ಎ.ಎನ್‌.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next