Advertisement

ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ : ಅನರ್ಹ ಶಾಸಕ‌ ಹೆಚ್.ವಿಶ್ವನಾಥ್

11:32 AM Nov 13, 2019 | Team Udayavani |

ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಸ್ಪೀಕರ್ ನಮ್ಮನ್ನು ಮೂರೂವರೆ ವರ್ಷ ರಾಜ್ಯ ರಾಜಕೀಯದಿಂದ ದೂರವಿಡುವ ಹುನ್ನಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ  ಎಂದು ನವದಹೆಲಿಯಲ್ಲಿ ಅನರ್ಹ ಶಾಸಕ‌ ಹೆಚ್.ವಿಶ್ವನಾಥ್ ಹೇಳಿದರು.

Advertisement

ಇದೇ ವೇಳೆಯಲ್ಲಿ ಮಾತಾನಾಡಿದ ಅನರ್ಹ ಶಾಸಕ ಬಿ.ಸಿ.ಪಾಟೀಲ್‌, ವಿಶ್ವನಾಥ್  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಾವು ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೆವು. ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧೆ ಎಂದು ಸದ್ಯದಲ್ಲೇ ತಿಳಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next