Advertisement

ಅನರ್ಹ ಶಾಸಕರ ಪ್ರಕರಣ; ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ: ಸಚಿವ ಸಿ.ಸಿ.ಪಾಟೀಲ್

04:17 PM Jan 04, 2020 | Team Udayavani |

ವಿಜಯಪುರ:ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಈ ಕುರಿತು ಇನ್ನಷ್ಟೇ ಮಾಹಿತಿ ಪಡೆಯಬೇಕಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಹೊಂದಿರುವ ಅರಣ್ಯ ಸಚಿವ ಸಿ.ಸಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ.

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯದ್ದು ಅನೈತಿಕ‌ ಸರ್ಕಾರ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‌ಹೇಳಿಕೆ‌ ನೀಡಿರುವುದು ಸರಿಯಾದ ಕ್ರಮವಲ್ಲ. ಅವರು ಹಿರಿಯ ರಾಜಕಾರಣಿ, ಎಲ್ಲರ ಕುರಿತು ಗೌರವದಿಂದ ಮಾತನಾಡಬೇಕು ಎಂದರು.

ಕಾಂಗ್ರೆಸ್ ಪಕ್ಷ ಇದೀಗ ಇಬ್ಬಾಗವಾಗಿದೆ. ಮಾತ್ರವಲ್ಲದೇ ಅದು ಸಿದ್ದರಾಮಯ್ಯನ ಪಕ್ಷ ಎಂದು ಕಾಂಗ್ರೆಸ್ ಮುಖಂಡರೇ ದೂರುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next