Advertisement

ಪಂಜಾಬ್ ನಲ್ಲಿ ಕೇಜ್ರಿವಾಲ್: ಎಲ್ಲರೂ ಹೆಮ್ಮೆ ಪಡುವ ಸಿಎಂ ಅಭ್ಯರ್ಥಿ ನೀಡುತ್ತೇವೆ

05:17 PM Sep 29, 2021 | Team Udayavani |

ಮೊಹಾಲಿ: ‘ನಾವು ಮತ್ತೆ ಮತ್ತೆ ಹೇಳುತ್ತಿದ್ದೇವೆ, ಆಮ್ ಆದ್ಮಿ ಪಕ್ಷ ಪಂಜಾಬ್ ಗೆ ಎಲ್ಲರೂ ಹೆಮ್ಮೆ ಪಡುವಂತಹ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನೀಡುತ್ತೇವೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

Advertisement

ಚುನಾವಣಾ ತಯಾರಿ ಮತ್ತು ಪಕ್ಷ ಸಂಘಟನಾ ಕಾರ್ಯಕ್ರಮಕ್ಕಾಗಿ ಪಂಜಾಬ್ ಗೆ ಆಗಮಿಸಿರುವ ಕೇಜ್ರಿವಾಲ್ ಅವರು , ‘ನೀವೆಲ್ಲರೂ ಹೆಮ್ಮೆ ಪಡುವಂತಹ, ಪಂಜಾಬ್ ಹೆಮ್ಮೆ ಪಡುವಂತಹ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಾವು ಘೋಷಿಸುತ್ತೇವೆ’. ನಾಳೆ ಸುದ್ದಿಗೋಷ್ಠಿಯಲ್ಲಿ ಸವಿವರಗಳನ್ನು ನೀಡುವುದಾಗಿ ತಿಳಿಸಿದರು.

ಬರ್ಗಾರಿ ಗ್ರಾಮದಲ್ಲಿ ಸಿಖ್ ಪವಿತ್ರ ಗ್ರಂಥ ಅಪವಿತ್ರ ಗೊಳಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿ, ‘ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎನ್ನುವುದನ್ನು ನಾನೇನು ಹೇಳಬೇಕಾಗಿಲ್ಲ. ಇದುವರೆಗೆ ಅವನಿಗೆ ಯಾವುದೇ ಶಿಕ್ಷೆಯಾಗಿಲ್ಲ. ಛನ್ನಿ ಸಾಹೇಬರು ಕುನ್ವಾರ್ ವಿಜಯ್ ಪ್ರತಾಪ್ ಅವರ ವರದಿಯನ್ನು ಓದಲೇಬೇಕು. ಅಲ್ಲಿ ಅವರಿಗೆ ಆರೋಪಿಗಳ ಹೆಸರು ಸಿಗುತ್ತದೆ. 24 ಗಂಟೆಗಳ ಒಳಗೆ ಅವರನ್ನು ಬಂಧಿಸಲಿ’ ಎಂದರು.

ಮುಖ್ಯಮಂತ್ರಿಯಾದ ಚರಣ್ ಜಿತ್ ಸಿಂಗ್ ಛನ್ನಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಅವರು ಕಳಂಕಿತರು ಮತ್ತು ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next