Advertisement

“ನಾವೇ ಬಹುಮತ ಸಾಬೀತು ಪಡಿಸುತ್ತೇವೆ’

11:56 PM Jul 11, 2019 | Team Udayavani |

ಬೆಂಗಳೂರು: ಬಿಜೆಪಿಯವರಿಗೆ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಅನಿಸಿದ್ದರೆ, ಯಾಕೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತೇವೆಂದು ಹೇಳುತ್ತಿಲ್ಲ.ನಾವೇ ವಿಶ್ವಾಸಮತ ಯಾಚನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಬಿಜೆಪಿ ನಾಯಕರಿಗೆ ಸಂಖ್ಯಾಬಲ ಇದ್ದರೆ, ಅವರೇಕೆ ಅವಿಶ್ವಾಸ ಮಂಡನೆ ಮಾಡುತ್ತಿಲ್ಲ. ಅವರಿಗೆ ಧೈರ್ಯವಿಲ್ಲ. ನಾವೇ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತುಪಡಿಸುತ್ತೇವೆ ಎಂದು ದಿನೇಶ್‌ ಹೇಳಿದರು.

ಸರ್ಕಾರ ಸುಭದ್ರವಾಗಿದೆ. ಇವತ್ತು ಸ್ಪೀಕರ್‌ ರಮೇಶ್‌ ಕುಮಾರ್‌ ಎದುರು ವಿಚಾರಣೆ ಆಗಿರುವುದು ಪ್ರಕರಣ. ಈ ಹಿಂದೆ ಪಕ್ಷ ವಿರೋಧಿ ಚಟುವಟಕೆ ಹಿನ್ನೆಲೆಯಲ್ಲಿ ನಾಲ್ವರನ್ನು ಅನರ್ಹ ಮಾಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದಾರೆ.

ಉಮೇಶ್‌ ಜಾಧವ್‌ ಬಿಟ್ಟು ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಠಳ್ಳಿ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮಕ್ಕೆ ಒತ್ತಾಯ ಮಾಡಿದ್ದೇವೆ ಎಂದರು .

Advertisement

Udayavani is now on Telegram. Click here to join our channel and stay updated with the latest news.

Next