Advertisement

ಇಂದು ಮಮತಾ, ಪ್ರಧಾನಿ ಭೇಟಿ

01:19 AM May 25, 2017 | Team Udayavani |

ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆಗೆ ವಿರೋಧಪಕ್ಷಗಳು ಸಾಹಸ ಮಾಡುತ್ತಿರುವಾಗಲೇ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೊದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಹಣಕಾಸು ನೆರವು ಕೊಡಬೇಕೆಂದು ಮನವಿ ಮಾಡಲಿದ್ದಾರೆ. ಗಂಗಾನದಿ ಕೊರೆತದಿಂದ ಉಂಟಾಗುತ್ತಿರುವ ಸಮಸ್ಯೆ  ತಪ್ಪಿಸಲು ಮತ್ತು ರಾಜ್ಯದ ರೈತರ ಸಾಲ ಮನ್ನಾಮಾಡಬೇಕು ಎಂಬ ಬೇಡಿಕೆಯನ್ನೂ ಇಡಲಿದ್ದಾರೆ. ದಿಲ್ಲಿ  ಭೇಟಿ ಸಮಯದಲ್ಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನೂ  ಭೇಟಿ ಮಾಡಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡ‌ಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next