Advertisement

West Bengal;ಅರಾಜಕತೆ ಪರಿಸ್ಥಿತಿ ಉಂಟಾಗಿದೆ ಎಂದು ರಾಷ್ಟ್ರಪತಿಗೆ ಕಾಂಗ್ರೆಸ್‌ ಪತ್ರ

11:51 PM Jul 27, 2024 | Team Udayavani |

ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಅರಾಜಕತೆಯ ಪರಿಸ್ಥಿತಿ ಉಂಟಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಿಸಿ ಕಾನೂನು ಸುವ್ಯವಸ್ಥೆ ಮರುಸ್ಥಾಪಿಸಬೇಕು ಎಂದು ಕೋರಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಪಶ್ಚಿಮ ಬಂಗಾಲ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಚೌಧರಿ ಪತ್ರದಲ್ಲಿ, ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಉಲ್ಲೇಖೀಸಿದ್ದು, ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಗಳಾಗಿದ್ದವು ಎಂದು 2 ಪುಟಗಳ ಪತ್ರದಲ್ಲಿ ಆರೋಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next