Advertisement

Protest ;ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಪಶ್ಚಿಮ ಬಂಗಾಲ ವೈದ್ಯರ ಪತ್ರ

12:52 AM Sep 14, 2024 | Team Udayavani |

ಕೋಲ್ಕತಾ: ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ತುತ್ತಾಗಿ ಕೊಲೆಯಾದ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸಿಕೊಡಲು ರಾಷ್ಟ್ರಪತಿ ಹಾಗೂ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಪ್ರತಿಭಟನಾ ನಿರತ ಕಿರಿಯ ವೈದ್ಯರು ಪತ್ರ ಬರೆದಿದ್ದಾರೆ.

Advertisement

ರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಆರೋಗ್ಯ ಸಚಿವರನ್ನು ಈ ಪತ್ರದಲ್ಲಿ ಉಲ್ಲೇಖೀಸಲಾಗಿದೆ. ನಾವು ವಿನಮ್ರವಾಗಿ ನಮ್ಮ ಸಮಸ್ಯೆಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ. ಅತ್ಯಂತ ಹೇಯ ಕೃತ್ಯಕ್ಕೆ ಬಲಿಯಾದ ನಮ್ಮ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸಿ ಕೊಡಿ ಎಂದು ಮನವಿ ಮಾಡಿದ್ದಾರೆ.

ಸುಳ್ಳು ಪತ್ತೆ ಪರೀಕ್ಷೆಗೆ ನಕಾರ
ಪ್ರಮುಖ ಆರೋಪಿಯ ಸುಳ್ಳುಪತ್ತೆ ಪರೀಕ್ಷೆ ನಡೆಸಬೇಕು ಎಂದು ಕೋರಿದ್ದ ಸಿಬಿಐ ಮನವಿಯನ್ನು ಕೋಲ್ಕತಾ ಕೋರ್ಟ್‌ ತಿರಸ್ಕರಿಸಿದೆ. ಸಂಜಯ್‌ ರಾಯ್‌ ಒಪ್ಪಿಗೆ ನೀಡದ ಕಾರಣ ಕೋರ್ಟ್‌ ಅನುಮತಿ ನಿರಾಕರಿಸಿದೆ.
ಪೊಲೀಸ್‌ ಠಾಣೆಗಳ ಎದುರು ಪ್ರತಿಭಟನೆ: ಸಿಪಿಐ ನೇತೃತ್ವದ ಎಡಪಕ್ಷಗಳು ರಾಜ್ಯದ ಪೊಲೀಸ್‌ ಠಾಣೆಗಳೆದುರು ಶುಕ್ರವಾರ ಪ್ರತಿಭಟನೆ ನಡೆಸಿ, ಮಮತಾ ರಾಜೀನಾಮೆಗೆ ಆಗ್ರಹಿಸಿವೆ. ಇತ್ತ ಬಿಜೆಪಿ ತನ್ನ ಪ್ರತಿಭಟನೆಯನ್ನು ಮುಂದುವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next