Advertisement

ಬಿಜೆಪಿಯಿಂದ ಅಮಾನತುಗೊಂಡಿದ್ದ ಜಯಪ್ರಕಾಶ್ ಮಜುಂದಾರ್ ಟಿಎಂಸಿ ಸೇರ್ಪಡೆ

01:52 PM Mar 08, 2022 | Team Udayavani |

ಕೋಲ್ಕತಾ: ಬಿಜೆಪಿಯಿಂದ ಅಮಾನತುಗೊಂಡಿದ್ದ ನಾಯಕ ಜಯಪ್ರಕಾಶ್ ಮಜುಂದಾರ್ ಸೋಮವಾರ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ.

Advertisement

ಬಿಜೆಪಿ ಉಪಾಧ್ಯಕ್ಷರಾಗಿದ್ದ ಅವರು ಕರೀಂಪುರದಿಂದ ವಿಧಾನಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಟಿಕೆಟ್‌ನಿಂದ ಸ್ಪರ್ಧಿಸಿ ಟಿಎಂಸಿಯ ಬಿಮಲೇಂದು ಸಿನ್ಹಾ ರಾಯ್ ವಿರುದ್ಧ 24,119 ಮತಗಳ ಅಂತರದಿಂದ ಸೋತಿದ್ದರು. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಅವರು 2014 ರಲ್ಲಿ ಬಿಜೆಪಿಗೆ ಸೇರಿದ್ದರು.

ಪ್ರಧಾನಿ ನರೇಂದ್ರ ಮೋದಿ ಸೇರಿ ಬಿಜೆಪಿ ನಾಯಕರ ವಿರುದ್ಧ ನಿರಂತರವಾಗಿ ಟೀಕಾ ಪ್ರಹಾರಗಳನ್ನು ನಡೆಸುತ್ತಿದ್ದ ಅವರನ್ನು ಪಕ್ಷದಿಂದ ವಜಾ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next