Advertisement

ಉದ್ಘಾಟನೆಗೊಂಡು ನಾಲ್ಕೇ ದಿನಕ್ಕೆ ವಂದೇ ಭಾರತ್ ರೈಲಿಗೆ ಕಲ್ಲೆಸೆತ, ತನಿಖೆಗೆ ಬಿಜೆಪಿ ಒತ್ತಾಯ

03:51 PM Jan 03, 2023 | Team Udayavani |

ಪಶ್ಚಿಮ ಬಂಗಾಳ: ಉದ್ಘಾಟನೆಯಾದ ನಾಲ್ಕನೇ ದಿನಕ್ಕೆ ಹೌರಾ-ನ್ಯೂ ಜಲ್ಪೈಗುರಿ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಘಟನೆ ಕುರಿತು ಎನ್‌ಐಎ ತನಿಖೆ ನಡೆಸುವಂತೆ ಬಿಜೆಪಿ ಒತ್ತಾಯಿಸಿದೆ.

ಸೋಮವಾರ ಸಂಜೆ ಮಾಲ್ಡಾ ಪಟ್ಟಣದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕುಮಾರ್‌ಗಂಜ್ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು ಯಾವುದೇ ಗಾಯಗಳಾಗಿರುವ ವರದಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಲ್ಲೆಸೆತದಿಂದ ರೈಲಿನ ಕೋಚ್ ಸಂಖ್ಯೆ C13 ನ ಗಾಜಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಗೌರವದ ನಂತರವೂ ಶ್ರೀಗಳ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ

Advertisement

ಸೋಮವಾರ ಸಂಜೆ 5.10 ಕ್ಕೆ ಈ ಘಟನೆ ನಡೆದ ನಂತರ ರೈಲನ್ನು ಮಧ್ಯದಲ್ಲಿ ಎಲ್ಲಿಯೂ ನಿಲ್ಲಿಸದೆ ಮಾಲ್ಡಾ ಟೌನ್ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next