Advertisement

Brothers ಮಾಡಿಲ್ಲ ಎಂದಿದ್ದ ಬ್ರದರ್ ಈಗೇನು ಹೇಳ್ತಾರೆ : ಯತ್ನಾಳ್ ಪ್ರಶ್ನೆ

12:45 PM Mar 03, 2024 | Team Udayavani |

ವಿಜಯಪುರ : ”ಕುಕ್ಕರ್ ಬಾಂಬ್ ಹಾಗೂ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಾಮ್ಯತೆ ಇದೆ. ಕುಕ್ಕರ್ ಬ್ಲಾಸ್ಟ್ ಸಂದರ್ಭದಲ್ಲಿ ನಮ್ಮ ಬ್ರದರ್ಸ್ ಮಾಡಿಲ್ಲ ಎನ್ನುತ್ತಿದ್ದ ಬ್ರದರ್ ಈಗ ಏನು ಹೇಳುತ್ತಾರೆ” ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ.

Advertisement

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಬಾಂಬ್ ಬ್ಲಾಸ್ಟ್ ಪ್ರಕರಣಗಳ ಸಂದರ್ಭದಲ್ಲಿ ನೀಡಿರುವ ಹೇಳಿಕೆಯನ್ನು ವ್ಯಂಗ್ಯವಾಗಿ ಕುಟುಕಿದರು. ದೇಶದಲ್ಲಿ ಅಸ್ಥಿರತೆ ಹಾಗೂ ಉದ್ಧೇಶ ಪೂರ್ವಕವಾಗಿ ಭಯ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಬಾಂಬ್ ಸ್ಫೋಟ ಮಾಡಲಾಗಿದೆ. ಪ್ರಕರಣದ ಕುರಿತು ಎನ್‍ಐಎ ತನಿಖೆ ನಡೆಸುತ್ತಿದ್ದು, ಸತ್ಯ ಹೊರಬರಲಿದೆ ಎಂದರು.

ಸಚಿವ ಶರಣಪ್ರಕಾಶ ಪಾಟೀಲ ದೇಶದಲ್ಲಿ ಭಯ ಹುಟ್ಟಿಸಲು ಉದ್ಧೇಶಪೂರ್ವಕವಾಗಿ ಮಾಡಿರುವ ಕೃತ್ಯ ಎಂದಿದ್ದಾರೆ. ಕುಕ್ಕರ್ ಬ್ಲಾಸ್ಟ್ ಆದಾಗ ಬ್ರದರ್ ಮಾಡಿಲ್ಲ ಎಂದಿದ್ದರು. ಇದೀಗ ಕುಕ್ಕರ್ ಬ್ಲಾಸ್ಟ್ ಹಾಗೂ ರಾಮೇಶ್ವರ ಕೆಫೆ ಸ್ಫೋಟಕ್ಕೆ ಸಾಮ್ಯತೆ ಇದೆ ಎನ್ನುತ್ತಿದ್ದಾರೆ. ಮುಖ್ಯಮಂತ್ರಿಗಳು ಬೇರೆ ರೀತಿಯಲ್ಲಿ ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.

ದೇಶದ ಆಂತರಿಕ ಭದ್ರತೆಯಂಧ ಗಂಭೀರ ವಿಷಯದಲ್ಲಿ ಬಾಂಬ್ ಸ್ಫೋಟ್ ಪ್ರಕರಣಗಳು ಸಂಭವಿಸಿದಾಗ ತನಿಖೆ ನಡೆಸುವಲ್ಲಿ ರಾಜ್ಯ ಸರ್ಕಾರ ತನಿಖೆಗೆ ಹಸ್ತಕ್ಷೇಪ ಮಾಡಬಾರದು. ಮತ್ತೊಂದೆಡೆ ಎನ್‍ಐಎ ತಂಡ ಆರ್ ಎಸ್‍ಎಸ್ ಮುಖಂಡ ರುದ್ರೇಶ ಹತ್ಯೆಗೆ ಸಂಬಂಧಿಸಿದಂತೆ ಆಫ್ರಿಕಾ ದೇಶದಲ್ಲಿ ಅಡಗಿದ್ದ ಹಂತಕನನ್ನು ಬಂಧಿಸಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next