Advertisement

ನನಗೆ ಜಗಳ ಇಷ್ಟವಿಲ್ಲ,ಐತಿಹಾಸಿಕ ಸತ್ಯ ಹೇಳಿದ್ದೇನೆ; ಕಮಲಹಾಸನ್‌

09:01 AM May 17, 2019 | Vishnu Das |

ಚೆನ್ನೈ: ನಾನು ಐತಿಹಾಸಿಕ ಸತ್ಯವನ್ನೇ ಹೇಳಿದ್ದೇನೆ ಹೊರತು ಯಾರೊಂದಿಗೂ ಜಗಳವಾಡಲು ನಾನು ಆ ರೀತಿ ಹೇಳಿಲ್ಲ ಎಂದು ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲಹಾಸನ್‌ ಅವರು ಹೇಳಿಕೆ ನೀಡಿದ್ದಾರೆ.

Advertisement

ಚುನಾವಣಾ ಪ್ರಚಾರದ ವೇಳೆ ‘ಗಾಂಧೀಜಿಯನ್ನು ಹತ್ಯೆಗೈದಿದ್ದ ನಾಥುರಾಮ್‌ ಗೋಡ್ಸೆ ಮೊದಲ ಹಿಂದು ಉಗ್ರ’ ಎಂಬ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ವಿಚಾರಕ್ಕೆ ಸಂಬಂಧಿಸಿ ಈ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ ಕಮಲ ಹಾಸನ್‌ ‘ನನ್ನ ಹೇಳಿಕೆಯನ್ನು ವಿಚಾರದ ಹೊರಗೆ ಕೊಂಡೊಯ್ಯಲಾಗಿದೆ’ ಎಂದಿದ್ದಾರೆ.

‘ನಾನೇನು ಹೇಳಿದ್ದೇನೋ ಅದರ ತಲೆ ಮತ್ತು ಬಾಲವನ್ನು ಕತ್ತರಿಸಿ ಬರೀ ಒಂದು ಭಾಗವನ್ನು ಮಾತ್ರ ಬಿತ್ತರಿಸಲಾಗಿದೆ. ನನ್ನ ಹೇಳಿಕೆಯನ್ನು ತಿರುಚಿ ಆಕ್ರೋಶ ಹೊರಹೊಮ್ಮುವಂತೆ ಮಾಡಲಾಗಿದೆ. ಯಾವೆಲ್ಲಾ ಐಪಿಸಿ ಸೆಕ್ಷನ್‌ಗಳಿವೆ ಅವುಗಳೆಲ್ಲವನ್ನೂ ನನ್ನ ಮೇಲೆ ಹಾಕಲಾಗಿದೆ. ಮಾಧ್ಯಮಗಳೂ ಕೂಡ ಇದಕ್ಕೆ ಸಮಾನ ಹೊಣೆಯಾಗುತ್ತಾರೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮಕ್ಕಳ್‌ ನೀಧಿ ಮಯ್ಯಂ(ಜನರ ನ್ಯಾಯ ಕೇಂದ್ರ)ಜಾತಿ, ವರ್ಣ, ಧರ್ಮವನ್ನು ಪರಿಗಣಿಸದೆ ಎಲ್ಲಾ ವರ್ಗದವರಿಗೂ ಸಮಾನ ಗೌರವ ನೀಡುವುದೇ ನಮ್ಮ ಪಕ್ಷದ ಗುರಿಯಾಗಿದೆ ಎಂದರು.

ನನ್ನ ಮನೆಯಲ್ಲೂ ಎಲ್ಲರೂ ದೇವರನ್ನು ಪ್ರಾರ್ಥಿಸುತ್ತಾರೆ. ನನ್ನ ಮಗಳು ಕೂಡ ದೈವ ಭಕ್ತೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next