Advertisement

ತಪ್ಪೇನಿದೆ ?: ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಾ.ಯತೀಂದ್ರ

03:10 PM Mar 26, 2022 | Team Udayavani |

ಮೈಸೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಶಿರವಸ್ತ್ರದ ಕುರಿತು ನೀಡಿದ ಹೇಳಿಕೆಯನ್ನು ವಾರ ಪುತ್ರ ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದು,ಜನ ಸಾಮಾನ್ಯರಿಗೆ ಅರ್ಥವಾಗಲಿ ಎಂದು ಆ ರೀತಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ,ಇದನ್ನು ಹೇಳಲು ಆ ಹೋಲಿಕೆ ನೀಡಿದ್ದಾರೆ. ದುಪ್ಪಟವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಸಿಲ್ಲ.ಸಿದ್ದರಾಮಯ್ಯ ಅವರು ಸ್ವಾಮೀಜಿಗಳಿಗೆ ಅವಮಾನ ಮಾಡುವ ರೀತಿ ಹೇಳಿಕೆ ಕೊಟ್ಟಿಲ್ಲ.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ಇಲ್ಲದೆ ಪರೀಕ್ಷೆಗೆ ಬರುತ್ತಿಲ್ಲ. ಹಿಜಾಬ್ ಬದಲು ದುಪ್ಪಟಕ್ಕೆ ಅವಕಾಶ ಕೊಡಿ ಅಂತಾ ಕೇಳಿದ್ದಾರೆ. ಇದನ್ನು ವಿಧಾನಸಭೆಯಲ್ಲೂ ಅವರು ಹೇಳಿದ್ದರು.ಇದರಲ್ಲೀ ತಪ್ಪೇನಿದೆ ? ಅವರು ನಿನ್ನೆ ಹಿಜಾಬ್ ಬಗ್ಗೆ ಮಾತನಾಡಿಲ್ಲ.ಇದರಲ್ಲಿ ವಿವಾದ ಮಾಡುವಂತದ್ದು ಏನಿದೆ‌? ಎಂದು ಪ್ರಶ್ನಿಸಿದರು.

ದುಪ್ಪಟ ಬಗ್ಗೆ ಮಾತನಾಡುವಾಗ ಹಿಂದೂ, ಜೈನ್ ಮಹಿಳೆಯರು ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದಿದ್ದಾರೆ.ನಮ್ಮ ನಾಯಕಿ ಇಂದಿರಾಗಾಂಧಿ ಅವರೂ ಕೂಡ ತಲೆಗೆ ಸೆರಗು ಹಾಕುತ್ತಿದ್ದರು.ಅವರು ಹಿಜಾಬ್‌ಗೂ ಕಾವಿ ಬಟ್ಟೆಗೂ ಹೋಲಿಕೆ ಮಾಡಿಲ್ಲ.ಸ್ವಾಮೀಜಿಗಳು ತಲೆ ಮೇಲೆ ಕಾವಿ ಹಾಕುವುದು ಸತ್ಯ ಅಲ್ವಾ ? ಎಲ್ಲಾ ಧರ್ಮಗಳಲ್ಲೂ ತಲೆ ಮೇಲೆ ಬಟ್ಟೆ ಹಾಕುವ ಸಂಸ್ಕೃತಿ ಇದೆ ಎಂಬುದನ್ನು ತಿಳಿಸಿದ್ದಾರೆ. ಹಿಜಾಬ್‌ಗೂ ಸ್ವಾಮೀಜಿಗಳ ಕಾವಿ ಒಂದೇ ಅಂತ ಹೇಳಿಲ್ಲ. ಇದನ್ನು ವಿವಾದ ಮಾಡುವಂತದ್ದು ಏನಿದೆ ?ಕೆಲ ಮಾಧ್ಯಮಗಳು ಹಾಗೂ ಬಿಜೆಪಿ ಐಟಿ ಸೆಲ್ ಈ ರೀತಿ ಮಾಡುತ್ತಿದೆ ಎಂದು ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next