Advertisement

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ತಪ್ಪೇನು?

10:44 PM Dec 22, 2019 | Team Udayavani |

ಬೆಳಗಾವಿ: ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ತಪ್ಪೇನಿದೆ. ದೇಶದಲ್ಲಿ ಎಲ್ಲರೂ ಬದುಕಬೇಕು. ಹಿಂದೂ ಎನ್ನುವುದು ಯಾವ ಜಾತಿಗೂ ಸೀಮಿತವಾಗಿಲ್ಲ. ದೇಶದಲ್ಲಿರುವ ಅನೇಕ ಹಳೆಯ ದಾಖಲಾತಿಗಳನ್ನು ನೋಡಿದರೆ ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಎಂದು ಬರೆದ ದಾಖಲಾತಿಗಳು ನಮಗೆ ಸಿಗುತ್ತವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಕುರಿತು ಸಿ.ಎಂ.ಇಬ್ರಾಹಿಂ ಅವರಿಗೆ ಮನವರಿಕೆಯಾಗಿದೆ. ಆದರೆ, ಇದೆಲ್ಲ ಗೊತ್ತಿದ್ದರೂ ಇಬ್ರಾಹಿಂ ರಾಜಕಾರಣ ಮಾಡುತ್ತಿದ್ದಾರೆ. ರೈಲ್ವೆ ಸೇರಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇನೆ. ಆದರೆ, ನಾನು ಯಾರನ್ನೂ ಪ್ರಚೋದನೆ ಮಾಡಿಲ್ಲ. ಪ್ರಚೋದನೆ ಮಾಡಿದ್ದರೆ ಖಾದರ್‌ ಹೇಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next