Advertisement

ಸುಧಾರಣೆಗಳು ಹೇಗಿರಬೇಕು, ಸಲಹೆ ಕೊಡಿ : ಪ್ರಧಾನಿ ನರೇಂದ್ರ ಮೋದಿ

09:32 AM Apr 30, 2022 | Team Udayavani |

ಸೂರತ್‌: “ಬ್ಯಾಂಕಿಂಗ್‌ ಮತ್ತು ಇತರ ಕ್ಷೇತ್ರಗಳಲ್ಲಿ ಯಾವ ರೀತಿ ಸುಧಾರಣೆಗಳು ಆಗಬೇಕು. ಈ ಬಗ್ಗೆ ಉದ್ಯಮಿಗಳೇ ತಮ್ಮಲ್ಲಿ ಗುಂಪು ರಚನೆ ಮಾಡಿಕೊಂಡು ಸುಧಾರಣೆಗೆ ಸಲಹೆಗಳನ್ನು ನೀಡಿ’ ಹೀಗೆಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಸೂರತ್‌ನಲ್ಲಿ ಆಯೋಜಿಸ ಲಾಗಿದ್ದ “ಜಾಗತಿಕ ಪಾಟಿದಾರ್‌ ವ್ಯಾಪಾರಿ ಸಮ್ಮೇಳನ- 2022’ರಲ್ಲಿ ಭಾಗವಹಿಸಿ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದಾರೆ. ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

Advertisement

ಸಾಮಾನ್ಯ ಜನರೂ ಉದ್ದಿಮೆದಾರರಾಗಲು ಅನುಕೂಲವಾಗುವಂಥ ನೀತಿಗಳನ್ನು ಕೇಂದ್ರ ರೂಪಿಸಲು ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಹತ್ತರಿಂದ ಹದಿನೈದು ಉದ್ದಿಮೆದಾರರ ಗುಂಪು  ಗಳು ರಚನೆಯಾಗಬೇಕು. ಅವರು ಬ್ಯಾಂಕಿಂಗ್‌ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಗತ್ತಿನಲ್ಲಿ ಉಂಟಾಗುತ್ತಿರುವ ಬದಲಾವಣೆಗಳನ್ನು ಅಧ್ಯಯನ ನಡೆಸಿ, ದೇಶದಲ್ಲಿಯೂ ಅದರ ಅನುಷ್ಠಾನ ಹೇಗೆ ನಡೆಯಬೇಕು ಎಂಬುದರ ಬಗ್ಗೆ ಸಲಹೆ ನೀಡಬೇಕು. ಜತೆಗೆ ನ್ಯೂನತೆಗಳು ಇದಲ್ಲಿ ಅದನ್ನು ಪ್ರಸ್ತಾವಿಸಿ, ಅದನ್ನು ಸರಿಪಡಿಸುವತ್ತಲೂ ಗಮನ ಹರಿಸಬೇಕು. ಇದರಿಂದಾಗಿ ಕೇಂದ್ರ ಸರಕಾರಕ್ಕೂ ನೀತಿಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇಂಥ ಗುಂಪುಗಳಲ್ಲಿ ಶಿಕ್ಷಣ ಕ್ಷೇತ್ರದ ತಜ್ಞರು ಮತ್ತು ವಿಷಯ ತಜ್ಞರೂ ಸೇರಿ ಕೊಳ್ಳ ಬೇಕಾಗಿರುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಪಿಎಲ್‌ಐನಿಂದ ಅನುಕೂಲ
ಕೇಂದ್ರ ಸರಕಾರ ಜಾರಿಗೊಳಿಸಿದ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ ನೀಡಿಕೆ (ಪಿಎಲ್‌ಐ) ಯೋಜನೆಯಿಂದಾಗಿ ಹಳೆಯ ಉದ್ಯಮ ವಲಯದಲ್ಲಿ ಹೊಸ ಚೇತರಿಕೆ ಕಾಣುವಂತೆ ಮಾಡಿದೆ. ಜತೆಗೆ, “ಮೇಕ್‌ ಇನ್‌ ಇಂಡಿಯಾ’ ಯೋಜನೆಗೂ ಅನುಕೂಲವಾಗಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಕೂಡ ಯಾವ ರೀತಿ ಹೊಸತನ ಅಳವಡಿಸಬಹುದು ಎಂಬ ಬಗ್ಗೆಯೂ ಪಾಟಿದಾರ್‌ ಸಮುದಾಯ ಚಿಂತನೆ ನಡೆಸಬೇಕು ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next