Advertisement

Hubli; ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಏನನ್ನು ಕಲಿಯಬೇಕಿಲ್ಲ: ಬಿಕೆ ಹರಿಪ್ರಸಾದ್

12:07 PM Dec 24, 2023 | Team Udayavani |

ಹುಬ್ಬಳ್ಳಿ: ನಾವು ಟಿಪ್ಪು ಸುಲ್ತಾನ ಪಾರ್ಟ್ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ. ನಮಗೆ ಟಿಪ್ಪು ಸುಲ್ತಾನ ಪರ ಎನ್ನುವವರು ಬ್ರಿಟಿಷರ ಬೂಟು ನೆಕ್ಕುವವರು. ಅವರಿಂದ ನಾವು ಏನನ್ನು ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ತು ಸದಸ್ಯ ಬಿ‌.ಹರಿಪ್ರಸಾದ ವಾಗ್ದಾಳಿ ನಡೆಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತುಷ್ಟೀಕರಣ ಮಾಡುತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡುತ್ತಿರುವುದು ಬಿಜೆಪಿ. ಹಿಂಸೆ ಹಾಗೂ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ಅಲ್ಪ ಸಂಖ್ಯಾತರು, ಮೀಸಲಾತಿ ವಿಚಾರದಲ್ಲಿ ಇವರದು ವಿರೋಧ. ನಾಗಪುರದಲ್ಲಿ ಇರುವವರು ಇವರ ಸೂತ್ರಧಾರರು ಹಾಗೂ ಜಾತಿ ಗಣತಿ ವಿರೋಧಿಗಳು. ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯವಿಲ್ಲ ಎಂದರು.

ಟಿಕೆಟ್ ಆಕಾಂಕ್ಷಿ: ನಾನು ಲೋಕಸಭೆ ಚುನಾವಣೆಗೆ ಆಕಾಂಕ್ಷಿ. ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಾಯಕ ಸಮಾಜದ ಪರ ಹೋರಾಟ ನಮ್ಮೆಲ್ಲರ ಇಚ್ಛೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆ ಬಗೆಹರಿಬೇಕು. ಮಲ್ಲಿಕಾರ್ಜುನ ಖರ್ಗೆ ಹೆಸರು ಬಂದಿರುವುದು ಸೂಕ್ತ. ಪ್ರಧಾನಿಮಂತ್ರಿ ಹುದ್ದೆಗೆ ಹೆಸರು ಬಂದಿರುವುದು ಸಂತೋಷ. ರಾಜಕಾರಣದಲ್ಲಿ ಯಾರನ್ನೂ ತುಳಿಯಲು ಆಗದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next