Advertisement

ಅಧಿಕಾರದಲ್ಲಿದ್ದಾಗ ಏನೂ ಮಾಡದವರು ಈಗೇನು ಮಾಡುತ್ತಾರೆ: ಡಿ.ಕೆ.ಶಿ. ಪ್ರಶ್ನೆ

11:39 PM Apr 07, 2024 | Team Udayavani |

ಬೆಂಗಳೂರು: ಅಧಿಕಾರದಲ್ಲಿದ್ದಾಗ ಏನೂ ಮಾಡದವರು ಈಗ ಏನು ಮಾಡುತ್ತಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಖಾರವಾಗಿ ಪ್ರಶ್ನಿಸಿದರು.

Advertisement

ರವಿವಾರ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹಾದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ತಮಗೆ ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡಲಿಲ್ಲ. ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ಕಬಾಬ್‌ ತಿನ್ನಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ಬಳಿಕ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ವಿಳಂಬ ಒಪ್ಪಿಕೊಂಡ ನಿರ್ಮಲಾ; ಡಿಕೆಶಿ ಕೃತಜ್ಞತೆ
ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಈಗ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಒಪ್ಪಿಕೊಂಡದ್ದು ಸಂತೋಷ. ಅವರಿಗೆ ಧನ್ಯವಾದಗಳು ಎಂದು ಡಿ.ಕೆ. ಶಿವಕುಮಾರ್‌ ಇದೇ ವೇಳೆ ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next