Advertisement

ಸಿದ್ದರಾಮಯ್ಯ ಹೇಳ್ಳೋದೆಲ್ಲ ಉಲ್ಟಾ ಆಗುತ್ತೆ: ಅಶೋಕ್‌ 

01:02 AM Feb 23, 2019 | Team Udayavani |

ಬೀದರ: ಸಿದ್ದರಾಮಯ್ಯ ಏನು ಹೇಳುತ್ತಾರೆಯೋ ಅದು ಉಲ್ಟಾ ಆಗುತ್ತೆ ಎಂದು ಮಾಜಿ ಡಿಸಿಎಂ ಆರ್‌.ಅಶೋಕ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದರು.

Advertisement

ಹುಮನಾಬಾದ ಪಟ್ಟಣದಲ್ಲಿ ನಡೆದ “ಬೀದರ-ಕಲಬುರಗಿ ಲೋಕಸಭೆ ಕ್ಷೇತ್ರದ ಶಕ್ತಿ ಕೇಂದ್ರಗಳ ಮುಖಂಡರ ಸಭೆ’ಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋದಿಲ್ಲ ಎಂದಿದ್ದರು. ಆದರೆ, ಚುನಾವಣೆ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗೋದಿಲ್ಲ ಎಂದು ಹೇಳುತ್ತಿದ್ದು, ಮುಂದಿನ ದಿನಗಳಲ್ಲಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಅದೇ ರೀತಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆಗೋದಿಲ್ಲವೆಂದು ಸಿದ್ದರಾಮಯ್ಯನವರ ಬಾಯಿಂದ ಬಂದರೆ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುತ್ತಾರೆಂದರು.

Advertisement

Udayavani is now on Telegram. Click here to join our channel and stay updated with the latest news.

Next