Advertisement

ಪಿಯುಸಿ ಅನಂತರ ಮುಂದೇನು ? ನೋಂದಣಿ ಆರಂಭ

02:11 AM Apr 13, 2019 | Sriram |

ಮಣಿಪಾಲ: ಇನ್ನೆರಡು ದಿನಗಳಲ್ಲಿ ಪಿಯುಸಿ ಫ‌ಲಿತಾಂಶ ಪ್ರಕಟವಾಗಲಿದ್ದು ಪಿಯುಸಿ ಅನಂತರದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಕರಾವಳಿಯ ಜೀವನಾಡಿ ಉದಯವಾಣಿಯು ವಿಶೇಷ ಮಾಹಿತಿಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.

Advertisement

ಪತ್ರಿಕೆಯು ತನ್ನ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ರಂಗದ ಪರಿಣತರು ಸಂಪೂರ್ಣ ಮಾರ್ಗದರ್ಶನ ನೀಡುವರು.

ವಿದ್ಯಾರ್ಥಿಗಳ ಭವಿಷ್ಯ ನಿರ್ಣಯಿಸುವ ನಿಟ್ಟಿಯಲ್ಲಿ ಪಿಯುಸಿ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಆಯ್ಕೆಯನ್ನು ಮಾಡಬೇಕಾಗುತ್ತದೆ. ಹಾಗಾಗಿ ಉದಯವಾಣಿ ವ್ಯವಸ್ಥೆ ಮಾಡಿದ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ಓದಿದ ಕಾಲೇಜ್‌, ಊರು ಮತ್ತು ಸಂಪರ್ಕ ಸಂಖ್ಯೆಯನ್ನು ತಪ್ಪದೇ ವಾಟ್ಸಾéಪ್‌ ನಂಬರ್‌ 8095192817ಕ್ಕೆ ಕಳುಹಿಸಿ ನೋಂದಾಯಿಸಿಕೊಳ್ಳಬೇಕು.

Advertisement

Udayavani is now on Telegram. Click here to join our channel and stay updated with the latest news.

Next