Advertisement

Priyanka Gandhi ಗೆ ಕೊಟ್ಟ ಬೊಕ್ಕೆಯಲ್ಲಿ ಹೂವೇ ಇರಲಿಲ್ಲ… ಮುಜುಗರಕ್ಕೆ ಒಳಗಾದ ನಾಯಕ

01:01 PM Nov 07, 2023 | sudhir |

ಮಧ್ಯಪ್ರದೇಶ: ಮುಂಬರುವ ಪಂಚ ರಾಜ್ಯ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ, ಇದರ ನಡುವೆ ಎರಡೂ ಪಕ್ಷಗಳು ಬಿಡುವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದೆ ಅದರಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಧ್ಯಪ್ರದೇಶದ ಇಂದೋರ್​ನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂದರ್ಭ ಅಲ್ಲಿನ ಕಾಂಗ್ರೆಸ್ ನಾಯಕರು ಅವರನ್ನು ಅಭಿನಂದಿಸುವ ವೇಳೆ ಓರ್ವ ನಾಯಕ ಹೂವೇ ಇಲ್ಲದ ಬೊಕ್ಕೆಯೊಂದನ್ನು ವೇದಿಕೆ ಮೇಲೆ ನೀಡಿದ ಪ್ರಸಂಗ ನಡೆದಿದೆ.

Advertisement

ನವೆಂಬರ್ 17 ರಂದು ಚುನಾವಣೆ ನಡೆಯಲಿರುವ ಇಂದೋರ್‌ನಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದು ಈ ನಡುವೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಚುನಾವಣಾ ಜಾಥಾದಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕರೊಬ್ಬರು ಪ್ರಿಯಾಂಕಾ ಗಾಂಧಿಗೆ ಹೂವಿಲ್ಲ ಖಾಲಿ ಬೊಕ್ಕೆಯನ್ನು ಕೊಟ್ಟು ಸ್ವಾಗತಿಸಿದ್ದಾರೆ, ಬೊಕ್ಕೆ ನೋಡಿದ ಪ್ರಿಯಾಂಕಾ ಇದೇನಿದು ಇದರಲ್ಲಿ ಹೂವೇ ಇಲ್ಲ ಎಂದು ಹೇಳಿದ್ದಾರೆ. ಆಗ ವೇದಿಕೆ ಮೇಲಿದ್ದ ನಾಯಕರು ಮುಜುಗರಕ್ಕೆ ಒಳಗಾದ ಪ್ರಸಂಗ ನಡೆಯಿತು.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈ ನಡುವೆ ಬಿಜೆಪಿ ನಾಯಕ ರಾಕೇಶ್ ತ್ರಿಪಾಠಿ ಟ್ವಿಟರ್ ‘ಎಕ್ಸ್’ ನಲ್ಲಿ ವಿಡಿಯೋ ಹಂಚಿಕೊಂಡಿದ್ದು ಇದು ಕಾಂಗ್ರೆಸ್ ನವರ “ಪುಷ್ಪಗುಚ್ಛ ಹಗರಣ” ಎಂದು ಗೇಲಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next