Advertisement

ಫೋನ್‌ ಕದ್ದಾಲಿಕೆ ಮಾಡಿದರೆ ತಪ್ಪೇನು?

06:55 AM Nov 24, 2018 | Team Udayavani |

ಬಾಗಲಕೋಟೆ: ಬಿಜೆಪಿ ಮುಖಂಡರು ಅಕ್ರಮ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಅಶೋಕ್‌ ಅವರ ಫೋನ್‌ ಕದ್ದಾಲಿಕೆ ಮಾಡಿದ್ದರಲ್ಲಿ ತಪ್ಪೇನೂ ಇಲ್ಲ. ಸರ್ಕಾರ ಇರುವುದೇ ಅಕ್ರಮ ಚಟುವಟಿಕೆ ನಿಯಂತ್ರಿಸಲು ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು.

Advertisement

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಅವರ ಫೋನ್‌ ಕದ್ದಾಲಿಕೆಯನ್ನು ಯಾರು ಮಾಡುತ್ತಿದ್ದಾರೆ, ಯಾವ ವಿಷಯಕ್ಕೆ ಕದ್ದಾಲಿಕೆ ನಡೆಯುತ್ತಿದೆ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು.

ಸುಮ್ಮನೇ ಆರೋಪ ಮಾಡಿ ಸಾರ್ವಜನಿಕವಾಗಿ ಘಾಸಿಗೊಳಿಸುವ ಕೆಲಸ ಮಾಡಬಾರದು. ಅಕ್ರಮ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ ಎಂದಾದರೆ ಫೋನ್‌ ಕದ್ದಾಲಿಕೆ ಬಗ್ಗೆ ಆತಂಕ ಏಕೆ ಪಡಬೇಕು. ಕೇವಲ ಆರೋಪ ಮಾಡಿ ಬಿಡಬಾರದು. ಅದನ್ನು ತಾರ್ಕಿಕ ಅಂತ್ಯಕ್ಕೆ
ತೆಗೆದುಕೊಂಡು ಹೋಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next