Advertisement

Yogi Adityanath ವಿರುದ್ಧ ಕಾಮೆಂಟ್ ಮಾಡಿದ್ದಕ್ಕಾಗಿ ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ

06:13 PM Aug 06, 2023 | Team Udayavani |

ಲಕ್ನೋ: ವಾಟ್ಸಾಪ್ ಗ್ರೂಪ್‌ ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ ಕಾರಣಕ್ಕೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಆಗಸ್ಟ್ 4 ರಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಕಾಮೆಂಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು ಎಂದು ಕೋಟ್ವಾಲಿ ಪೊಲೀಸ್ ಠಾಣಾಧಿಕಾರಿ ಅಜಯ್ ಕುಮಾರ್ ಸೇಠ್ ಹೇಳಿದ್ದಾರೆ.

ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಕಾಮೆಂಟ್ ಪೋಸ್ಟ್ ಮಾಡಿದ ಮುಸ್ಲಿಂ ಅನ್ಸಾರಿ ಎಂದು ಗುರುತಿಸಲಾದ ವ್ಯಕ್ತಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಅವರು ಹೇಳಿದರು.

ಈ ಸಂಬಂಧ ಪೊಲೀಸರು ಆಗಸ್ಟ್ 4 ರಂದು ಟ್ವಿಟರ್ ಮೂಲಕ ದೂರು ಸ್ವೀಕರಿಸಿದ್ದಾರೆ ಎಂದು ಸೇಠ್ ಹೇಳಿದ್ದಾರೆ.

ಇದನ್ನೂ ಓದಿ:ಟಿ20 ಕ್ರಿಕೆಟ್ ಗೆ ರೋಹಿತ್ ವಿದಾಯ ಹೇಳುತ್ತಾರಾ? ಉತ್ತರ ಹೇಳಿದ ಟೀಂ ಇಂಡಿಯಾ ನಾಯಕ

Advertisement

ಅವಹೇಳನಕಾರಿ ಕಾಮೆಂಟ್‌ ನ ಸ್ಕ್ರೀನ್‌ ಶಾಟ್ ಪಡೆಯಲಾಗಿದೆ ಎಂದು ಅವರು ಹೇಳಿದರು.

ದೂರಿನ ಆಧಾರದ ಮೇಲೆ ಸಹಾಬುದ್ದೀನ್ ಅನ್ಸಾರಿ ಮತ್ತು ಮುಸ್ಲಿಂ ಅನ್ಸಾರಿ ವಿರುದ್ಧ ಐಪಿಸಿ, ಐಟಿ ಕಾಯ್ದೆ ಮತ್ತು ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ವಾಟ್ಸಾಪ್ ಗ್ರೂಪ್‌ನ ಹೆಸರು ‘ನಗರ ಪಾಲಿಕೆ ಪರಿಷತ್ ಭದೋಹಿ’, ಇದು ಭಡೋಹಿಯ ನಗರ ಪಾಲಿಕೆ ಪರಿಷತ್ತಿನ ಬಹುತೇಕ ಎಲ್ಲಾ ಕಾರ್ಪೊರೇಟರ್‌ಗಳು ಮತ್ತು ಸಾರ್ವಜನಿಕರನ್ನು ಹೊಂದಿದೆ. ಇದರ ಉದ್ದೇಶ ಸಾಮಾನ್ಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದಾಗಿದೆ ಎಂದಿದ್ದಾರೆ.

ಆದರೆ ಇದು ಕಾರ್ಪೊರೇಟರ್‌ಗಳ ಅಧಿಕೃತ ವಾಟ್ಸಾಪ್ ಗ್ರೂಪ್ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next