Advertisement

ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಮೂವರಿಗೆ ಗಾಯ

11:52 AM Feb 10, 2022 | Team Udayavani |

ದಾವಣಗೆರೆ: ವಾಟ್ಸಪ್ ನಲ್ಲಿನ ಸ್ಟೇಟಸ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಮೂರು ಜನರು ಗಾಯವಾದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಾರೆ ಎಂದು ವಾಗ್ವಾದ ನಡೆಸಿದ ಒಂದು ಗುಂಪು ಮನೆಯೊಂದಕ್ಕೆ ನುಗ್ಗಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ.

ಗಲಾಟೆಯಲ್ಲಿ ವೃದ್ದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಹಿಜಾಬ್‌-ಕೇಸರಿ ವಿವಾದ : 6 ಪ್ರಕರಣ ದಾಖಲು ; ಎಸ್ಪಿ ರಿಷ್ಯಂತ್‌ ಹೇಳಿಕೆ

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಎರಡು ಕೋಮಿನ ಮುಖಂಡರ ಜೊತೆಗೆ ಪೊಲೀಸರು ಸಭೆ ನಡೆಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next